ಮನಸ್ಸಿನಲ್ಲಿ ಯಾವಾಗಲೂ ಪ್ರಾಣಭಯವಿರುವುದರಿಂದಲೂ ಕಣ್ಣಿನಿಂದ ಭಯಂಕರವಾದ ಸಂಗತಿಗಳನ್ನು ನೋಡುವುದರಿಂದಲೂ ನೀವು ಹೊತ್ತಾರೆಯಲ್ಲಿ, “ಅಯ್ಯೋ, ಅಯ್ಯೋ ಸಾಯಂಕಾಲ ಯಾವಾಗ ಬರುವುದೋ” ಎಂದೂ, ಸಾಯಂಕಾಲದಲ್ಲಿ, “ಅಯ್ಯೋ, ಅಯ್ಯೋ! ಬೆಳಿಗ್ಗೆ ಯಾವಾಗ ಬರುವುದೋ” ಎಂದು ಕೊರಗುವಿರಿ.
TSK
TSK · ಯೆಶಾಯ 21:4
Treasury of Scripture Knowledge references in ಕನ್ನಡ IRV.
ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು.
“ಇದಲ್ಲದೆ ಎಸ್ತೇರ್ ರಾಣಿಯು ತಾನು ಸಿದ್ಧಮಾಡಿಸಿದ ಔತಣಕ್ಕೆ ಅರಸನ ಜೊತೆಯಲ್ಲಿ ನನ್ನ ಹೊರತಾಗಿ ಇನ್ನಾರನ್ನೂ ಆಹ್ವಾನಿಸಲಿಲ್ಲ. ನಾಳೆಯೂ ಅರಸನ ಜೊತೆಯಲ್ಲಿ ಬರಬೇಕೆಂದು ನನಗೆ ಹೇಳಿದ್ದಾಳೆ.
ತಮ್ಮ ಮಕ್ಕಳನ್ನು ಮಂದೆಮಂದೆಯಾಗಿ ನಡೆಸುವರು, ಅವರ ಮಕ್ಕಳು ಕುಣಿದಾಡುವರು.
ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು, ಸಂಜೆಯಾದ ಮೇಲೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಗತಿಯನ್ನು ಏನೆಂದು ಹೇಳಲಿ!
ಅವರು ಹೊಟ್ಟೆಬಾಕರು, ನಾನು ಅವರಿಗೆ ಔತಣವನ್ನು ಸಿದ್ಧಪಡಿಸುವೇನು, ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವಂತೆ ತಲೆಗೇರುವ ಮಟ್ಟಿಗೆ ಕುಡಿಸುವೆನು. ಇದು ಯೆಹೋವನ ನುಡಿ” ಎಂಬುದೇ.
¶ ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಏರ್ಪಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು.
ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.
¶ ‹“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.›