¶ ಈ ಭಕ್ತಿ ಕಾರ್ಯಗಳಾದ ನಂತರ ಅಶ್ಶೂರದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಯೆಹೂದದಲ್ಲಿ ನುಗ್ಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿ ಕೊಳ್ಳಬೇಕೆಂದು ಅವುಗಳಿಗೆ ಮುತ್ತಿಗೆ ಹಾಕಿದನು.
TSK
TSK · ಯೆಶಾಯ 22:9
Treasury of Scripture Knowledge references in ಕನ್ನಡ IRV.
ಇದರಿಂದ ಅರಸನು ಧ್ಯೆರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ಜೀರ್ಣೋದ್ಧಾರ ಮಾಡಿಸಿ, ಅದರ ಮೇಲೆ ಗೋಪುರಗಳನ್ನೂ, ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದಲ್ಲದೆ. ಅನೇಕ ಆಯುಧಗಳನ್ನೂ, ಗುರಾಣಿಗಳನ್ನೂ ಮಾಡಿಸಿದನು.
ನೆಹೆಮಿಯ 3:16
TSK
ಇವನ ನಂತರ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವರು ಬೇತ್ಚೂರಿನ ಒಡೆಯನೂ, ಅಜ್ಬೂಕನ ಮಗನೂ ಆದ ನೆಹೆಮೀಯನು.