¶ ಯಾವಾನನ ಸಂತಾನದವರು - ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳದವರು. ಇವರು ಸಮುದ್ರದ ರೇವು ಪ್ರದೇಶಗಳಲ್ಲಿ ಹರಡಿಕೊಂಡರು.
TSK
TSK · ಯೆಶಾಯ 23:1
Treasury of Scripture Knowledge references in ಕನ್ನಡ IRV.
ಅಲ್ಲಿಂದ ಅದು ತಿರುಗಿಕೊಂಡು ರಾಮ, ತೂರ್ ಕೋಟೆ, ಹೋಸಾ ಇವುಗಳ ಮೇಲೆ ಅಕ್ಜೀಬ್ ಪ್ರಾಂತ್ಯಕ್ಕೆ ಹೋಗಿ ಸಮುದ್ರ ತೀರದಲ್ಲಿ ಕೊನೆಗೊಳ್ಳುತ್ತದೆ.
ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷೀಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರಗಳನ್ನು ಮತ್ತು ನವಿಲುಗಳನ್ನೂ ತರುತ್ತಿದ್ದವು.
ಅರಸನ ಹಡುಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರ, ನವಿಲು ಇವುಗಳನ್ನು ತರುತ್ತಿದ್ದವು.
ಎಲ್ಲಾ ದೊಡ್ಡ ದೊಡ್ಡ ತಾರ್ಷೀಷ್ ನ ಹಡಗುಗಳ ಮೇಲೆಯೂ, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿನ ಮೇಲೆಯೂ ಆ ದಿನವೂ ತಪ್ಪದೇ ಬರುವುದು.
ಪ್ರಲಾಪವು ಮೋವಾಬಿನ ಎಲ್ಲೆಗಳ ತನಕ ಹಬ್ಬಿದೆ, ಅದರ ಅರಚಾಟವು ಎಗ್ಲಯಿಮಿನವರೆಗೂ, ಬೆಯೇರ್ ಏಲೀಮಿನ ಪರ್ಯಂತರವೂ ವ್ಯಾಪಿಸಿದೆ.
ಹಾಳುಪಟ್ಟಣವು ಬಿದ್ದುಹೋಗಿದೆ, ಯಾರೂ ಹೋಗದಂತೆ ಪ್ರತಿಯೊಂದು ಮನೆಯೂ ಮುಚ್ಚಿದೆ.
“ಕಿತ್ತೀಮ್ ದ್ವೀಪಗಳಿಗೆ ಹೋಗಿ ನೋಡಿರಿ, ಕೇದಾರಿಗೆ ಕಳುಹಿಸಿ ವಿಚಾರಮಾಡಿರಿ, ಇಂತಹ ಕಾರ್ಯವು ಎಲ್ಲಿಯಾದರೂ ನಡೆಯಿತೇ ಎಂದು ಚೆನ್ನಾಗಿ ಆಲೋಚಿಸಿರಿ.
¶ ಇಸ್ರಾಯೇಲರ ದೇವರಾದ ಯೆಹೋವನು ನನಗೆ, “ರೋಷರೂಪ ಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.
ಏಕೆಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಉಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.
ಅವನ ವಿರುದ್ಧವಾಗಿ ಕಿತ್ತೀಮಿನ ಹಡಗುಗಳು ಬರಲು, ಅವನು ಎದೆಗುಂದಿ ಹಿಂದಿರುಗಿ ಪರಿಶುದ್ಧ ನಿಬಂಧನೆಯ ಮೇಲೆ ಮತ್ಸರಗೊಂಡು ತನಗೆ ಇಷ್ಟ ಬಂದಂತೆ ಮಾಡುವನು. ಅವನು ಸ್ವದೇಶಕ್ಕೆ ಸೇರಿ ಪರಿಶುದ್ಧ ನಿಬಂಧನೆಯನ್ನು ತೊರೆದವರನ್ನು ಕಟಾಕ್ಷಿಸುವನು.
ಯೆಹೋವನು ಇಂತೆನ್ನುತ್ತಾನೆ: “ತೂರ್ ಪಟ್ಟಣವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಒಡಹುಟ್ಟಿದವರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೇ, ಜನರನ್ನು ಗುಂಪುಗುಂಪಾಗಿ ಎದೋಮಿಗೆ ವಶಮಾಡಿಬಿಟ್ಟಿತು.
ಅಷ್ಟು ಐಶ್ವರ್ಯವು ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ ಎಂದು ಪರಿತಪಿಸುವರು. ಇದಲ್ಲದೆ ಹಡಗುಗಳ ಯಜಮಾನರೂ, ಪಯಣಿಗರೂ, ನಾವಿಕರೂ ಸಮುದ್ರದಿಂದ ತಮ್ಮ ಜೀವನವನ್ನುಮಾಡುತ್ತಿದ್ದವರೆಲ್ಲರೂ ದೂರದಲ್ಲಿ ನಿಂತು,