ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವುದು; ಮತ್ತು ಈ ಜನಾಂಗಗಳು ಎಪ್ಪತ್ತು ವರ್ಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.
TSK
TSK · ಯೆಶಾಯ 23:17
Treasury of Scripture Knowledge references in ಕನ್ನಡ IRV.
ನಿನ್ನ ನೆರೆಯವರೂ ಅತಿಕಾಮಿಗಳೂ ಆದ ಐಗುಪ್ತ್ಯರೊಂದಿಗೆ ಸಹ ನೀನು ಬೆರೆತು ಹೆಚ್ಚಾಗಿ ವ್ಯಭಿಚಾರಮಾಡಿ ನನ್ನನ್ನು ರೇಗಿಸಿರುವೆ.
¶ “‘ಇಗೋ, ನೀನು ದೋಚಿಕೊಂಡ ಲಾಭವನ್ನೂ, ನಿನ್ನಲ್ಲಿ ಸುರಿದ ರಕ್ತವನ್ನೂ ನಾನು ನೋಡಿ ಕೈ ಎತ್ತಿದ್ದೇನೆ.
ಕಾನಾನು! ಅದರ ಕೈಯಲ್ಲಿ ಮೋಸದ ತ್ರಾಸು ಇದೆ; ಕಸಕೊಳ್ಳಬೇಕೆಂಬದೇ ಅದರ ಆಶೆ.
ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.
ಆ ಕರಾವಳಿಯು ಉಳಿದ ಯೆಹೂದ್ಯರ ಪಾಲಾಗುವುದು; ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು.
ಅವನು ಕುಡಕನು, ಜಗಳವಾಡುವವನೂ ಆಗಿರದೆ, ಸಾತ್ವಿಕನೂ, ಹೊಡೆದಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.
ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.
¶ “ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾದ ಭೂರಾಜರು ಅವಳ ದಹನದಿಂದೇರುವ ಹೊಗೆಯನ್ನು ನೋಡಿ ಭಯಪಟ್ಟು ಅವಳಿಗಾಗಿ ದೂರದಲ್ಲಿ ನಿಂತು ಅಳುತ್ತಾ ಗೋಳಾಡುತ್ತಾ, ‘ಅಯ್ಯೋ ಅಯ್ಯೋ ಮಹಾ ನಗರವಾದ ಬಾಬೆಲ್ ಪಟ್ಟಣವೇ, ಬಲಿಷ್ಠವಾದ ಬಾಬೆಲ್ ನಗರಿಯೇ ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ತಾಸಿನಲ್ಲಿ ಬಂದಿತಲ್ಲಾ’ ಎಂದು ಶೋಕಿಸುವರು.