¶ ಚೊಕ್ಕ ಬಂಗಾರದಿಂದ ಒಂದು ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತಿಸುವ ರೀತಿಯಲ್ಲಿ ಅದರ ಮೇಲೆ “ಯೆಹೋವನಿಗೆ ಮೀಸಲು” ಎಂಬ ಲಿಪಿಯನ್ನು ಕೆತ್ತಿಸಬೇಕು.
TSK
TSK · ಯೆಶಾಯ 23:18
Treasury of Scripture Knowledge references in ಕನ್ನಡ IRV.
¶ ದಶಮಾಂಶವನ್ನು ಕೊಡಬೇಕಾದ ಮೂರನೆಯ ವರ್ಷದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ನೀವು ಪ್ರತ್ಯೇಕಿಸಿದಾಗ, ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರೂ, ಪರದೇಶಿಗಳೂ, ಅನಾಥರು ಮತ್ತು ವಿಧವೆಯರೂ ಊಟಮಾಡಿ ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ.
¶ ತೂರಿನ ಅರಸನಾದ ಹೂರಾಮನು ಸೊಲೊಮೋನನಿಗೆ ಪತ್ರದ ಮೂಲಕ ತನ್ನ ಒಪ್ಪಿಗೆ ಸೂಚಿಸಿದನು. “ಯೆಹೋವನು ತನ್ನ ಪ್ರಜೆಗಳನ್ನು ಪ್ರೀತಿಸುವವನಾಗಿರುವುದರಿಂದ ನಿನ್ನನ್ನು ಅವರ ಅರಸನನ್ನಾಗಿ ನೇಮಿಸಿದ್ದಾನೆ.”
ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.
ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ, ಪಾಪಿಯ ಸೊತ್ತು ಸಜ್ಜನರಿಗೆ ಗಂಟು.
ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
ಚೀಯೋನ್ ನಗರಿಯೇ ಎದ್ದು ಒಕ್ಕಣೆ ಮಾಡು, ನಾನು ನಿನ್ನ ಕೊಂಬನ್ನು ಕಬ್ಬಿಣದ ಕೊಂಬನ್ನಾಗಿಯೂ, ನಿನ್ನ ಗೊರಸನ್ನು ತಾಮ್ರದ ಗೊರಸನ್ನಾಗಿಯೂ ಮಾಡುವೆನು. ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ, ಆ ದೇಶಗಳು ಕೊಳ್ಳೆ ಹೊಡೆದು ಸಂಪಾದಿಸಿದ್ದ ಐಶ್ವರ್ಯವನ್ನು ನೀನು ಯೆಹೋವನಿಗಾಗಿ ಮೀಸಲಾಗಿಡುವೆ. ಅವರ ಆಸ್ತಿಯನ್ನು ಲೋಕದ ಕರ್ತನ ಮುಂದೆ ಸಮರ್ಪಿಸುವಿ.
ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.
‹ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.›
ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ಇದೂಮಾಯದಿಂದಲೂ, ಯೊರ್ದನ್ ಹೊಳೆಯ ಆಚೆಯಿಂದಲೂ, ತೂರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು.
‹‘ಒಂದು ಕೆಲಸ ಮಾಡುತ್ತೇನೆ. ನನ್ನ ಕಣಜಗಳನ್ನು ಕೆಡವಿ ಅವುಗಳಿಗಿಂತ ದೊಡ್ಡ ಕಣಜಗಳನ್ನು ಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನು ತುಂಬಿಟ್ಟು,›
¶ ‹“ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.›
ಮುಂದೆ ಕುಪ್ರದ್ವೀಪವನ್ನು ಕಂಡು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೂರ್ ಪಟ್ಟಣಕ್ಕೆ ಬಂದು ಇಳಿದೆವು. ಏಕೆಂದರೆ, ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು.
¶ ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು.