TSK

TSK · ಯೆಶಾಯ 24:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಜನ ಮಾತ್ರ ಉಳಿಯುವಿರಿ.

ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು.

ಆದರೂ, ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ನೆನಪಿಸಿಕೊಳ್ಳಿರಿ; ‘ನೀವು ಅವಿಧೇಯರಾಗಿ ನಡೆಯುವುದಾದರೆ ನಾನು ನಿಮ್ಮನ್ನು ಜನಾಂಗಗಳ ಮದ್ಯ ಚದುರಿಸಿಬಿಡುವೆನು;

ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು.

ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.

ಯೆಹೋವನು ನಿನ್ನ ಮೇಲೆಯೂ, ನಿನ್ನ ಪ್ರಜೆಯ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಅಂದರೆ ಅಶ್ಶೂರದ ಅರಸನ ಕಾಲದಿಂದಲೂ ಬಾರದೆ ಇದ್ದ ದುರ್ದಿನಗಳನ್ನು ಬರಮಾಡುವನು.”

ಕೋಟೆಕೊತ್ತಲದ ಪಟ್ಟಣವು ಹಾಳಾಗಿ, ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸ ಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವುದು, ಅಲ್ಲಿನ ಚಿಗುರುಗಳನ್ನು ತಿಂದುಬಿಡುವುದು.

ಅಯ್ಯೋ, ನೀವು ಎಂಥಾ ಮೂರ್ಖರು! ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿಮಣ್ಣಿನಂತೆ ಪರಿಗಣಿಸಲಾಗುವುದು. ಕೆಲಸ ಮಾಡಿದವನಿಗೆ ಮಾಡಲ್ಪಟ್ಟದ್ದು, “ಆತನು ಕೆಲಸ ಮಾಡಲಿಲ್ಲ” ಎಂದು ಹೇಳುವುದೋ? ಇಲ್ಲವೇ, ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸಲ್ಪಟ್ಟದ್ದು, “ಆತನಿಗೆ ವಿವೇಕವಿಲ್ಲ” ಎಂದು ಹೇಳುವುದೋ?

ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉತ್ಸಾಹದಿಂದ ಕೂಡಿದ್ದ ಎಲ್ಲಾ ಮನೆಗಳ ಮತ್ತು ಪಟ್ಟಣಗಳಲ್ಲೂ ಮುಳ್ಳುಗಿಡಗಳು ಹುಟ್ಟಿಕೊಂಡಿವೆ.

ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ, ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ.

ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು.

ಆಗ ಕಾರೇಹನ ಮಗನಾದ ಯೋಹಾನಾನ ಮಿಚ್ಪದಲ್ಲಿದ್ದ ಗೆದಲ್ಯನಿಗೆ, “ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕೊಲ್ಲಲಿಕ್ಕೆ ಅಪ್ಪಣೆಯಾಗಲಿ; ಇದು ನಿನ್ನ ಅಪ್ಪಣೆ ಎಂದು ಯಾರಿಗೂ ತಿಳಿದು ಬರುವುದಿಲ್ಲ; ಅವನು ನಿನ್ನನ್ನು ಕೊಂದರೆ ನಿನ್ನ ಆಶ್ರಯದ ಯೆಹೂದ್ಯರೆಲ್ಲರೂ ದಿಕ್ಕಾಪಾಲಾಗಿ ಯೆಹೂದದ ಶೇಷವು ನಿಶ್ಶೇಷವಾಗುವುದಲ್ಲಾ; ಏಕೆ ಹೀಗಾಗಬೇಕು?” ಎಂದು ರಹಸ್ಯವಾಗಿ ವಿಜ್ಞಾಪಿಸಿದನು.

ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲನ್ನು ಮೂರು ಭಾಗ ಮಾಡಿ, ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು.

¶ “‘ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವುದರಿಂದಲೂ, ಪೂಜಾ ಸ್ಥಳಗಳು ಪಾಳುಬೀಳುವುದರಿಂದಲೂ ನಿಮ್ಮ ಯಜ್ಞವೇದಿಗಳು ಹಾಳಾಗುವವು; ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲವಾಗುವವು, ನಿಮ್ಮ ಸೂರ್ಯಸ್ತಂಭಗಳು ಕಡಿಯಲ್ಪಡುವುವು.

ಸಮಯ ಬಂದಿದೆ, ದಿನ ಸಮೀಪಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.

ಆಗ ಜನ ತುಂಬಿದ ಊರುಗಳು ಹಾಳಾಗಿ ದೇಶವು ಬೀಡುಬೀಳುವುದು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’”

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ಹಾಳುಮಾಡಿ, ಲೋಕವನ್ನೆಲ್ಲಾ ಸಂತೋಷಪಡಿಸುವೆನು.

¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.

ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಮತ್ತು ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋಗಿ; “ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.