TSK

TSK · ಯೆಶಾಯ 24:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.

“ಆ ದಿನದಲ್ಲಿ, ಯಾಕೋಬಿನ ಮಾಂಸದ ಕೊಬ್ಬು ಕರಗಿ, ಅದರ ಮಹಿಮೆಯೂ ಕ್ಷೀಣವಾಗುವುದು.

ಆದರೂ ಎಣ್ಣೆಯ ಮರದ ಕಾಯಿಗಳನ್ನು ಉದುರಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ, ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲುಹಣ್ಣುಗಳು ಅದರಲ್ಲಿ ಉಳಿದಿರುವುದು” ಎಂದು ಇಸ್ರಾಯೇಲರ ದೇವರಾದ ಯೆಹೋವನು ನುಡಿಯುತ್ತಾನೆ.

¶ “‘ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.

ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು.

ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿ ಸಮಾಧಾನ ಹೊಂದುವಿರಿ.

‹ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.›

‹ಆದರೂ›‹ತಮ್ಮ ಅಂಗಿಗಳನ್ನು ಮಲಿನ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನಲ್ಲಿ ನಿನಗಿದ್ದಾರೆ. ಅವರು›‹ಯೋಗ್ಯರಾಗಿರುವುದರಿಂದ›‹ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.›