¶ ಬರಗಾಲ ಬರುವುದಕ್ಕಿಂತ ಮೊದಲು ಯೋಸೇಫನಿಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ಇವರು ಓನ್ ಪಟ್ಟಣದ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದರು.
TSK
TSK · ಯೆಶಾಯ 24:2
Treasury of Scripture Knowledge references in ಕನ್ನಡ IRV.
¶ ಹಣವನ್ನಾಗಲಿ, ಆಹಾರಪದಾರ್ಥಗಳನ್ನಾಗಲಿ ಬೇರೆ ಯಾವುದನ್ನಾಗಲಿ ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು.
ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆಯೊಯ್ದನು. ಪಾರಸಿಯರ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
ಇದಲ್ಲದೆ ಶೂರ, ಯುದ್ಧಭಟರು, ನ್ಯಾಯಾಧಿಪತಿ, ಪ್ರವಾದಿ, ಶಕುನದವ, ಹಿರಿಯ,
ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆ ಮತ್ತು ಬಾಲಗಳನ್ನು, ಖರ್ಜೂರದ ಕೊಂಬೆಗಳನ್ನು ಮತ್ತು ಬೇರುಗಳನ್ನು ಒಂದೇ ದಿನದಲ್ಲಿ ಕಡಿದು ಹಾಕುವನು.
ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು. ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.
ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನನ್ನ ಉಗ್ರರೋಷಾಗ್ನಿಯು ಯೆರೂಸಲೇಮಿನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವುದು; ನೀವು ಅಪವಾದ, ವಿಸ್ಮಯ, ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.’”
ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಮೂರು ಜನ ದ್ವಾರಪಾಲಕರು,
ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕರ ಪಾಪ ಮತ್ತು ಪ್ರವಾದಿಗಳ ದೋಷಗಳಿಂದಲೇ ಈ ಗತಿ ಬಂತು.
ರಾಜಪುತ್ರರ ಕೈಗಳನ್ನು ಗಲ್ಲಿಗೆ ನೇತುಹಾಕಿದ್ದಾರೆ; ವೃದ್ಧರು ಮಾನಭಂಗಪಟ್ಟರು.
ಅವನ ಮೇಲೆ ಉಗ್ರಕೋಪಗೊಂಡು, ಅವನನ್ನು ಎಚ್ಚರಿಕೆಗೆ ಗುರುತಾಗಿಯೂ, ಕಟ್ಟು ಗಾದೆಗಳಿಗೂ ವಸ್ತುವಾಗಿ ಮಾಡಿ, ನನ್ನ ಜನರೊಳಗಿಂದ ಕಿತ್ತುಹಾಕುವೆನು; ಹೀಗೆ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
ಜನರೂ, ಯಾಜಕರೂ ಒಂದೇ; ಅವರ ದುಷ್ಕಾರ್ಯಗಳಿಗೆ ಅವರನ್ನು ದಂಡಿಸುವೆನು, ಅವರ ದುಷ್ಕೃತ್ಯಗಳನ್ನು ಅವರಿಗೆ ಕಟ್ಟುವೆನು.