ಮುಂದೆ ಬರುವ ಕ್ಷಾಮವು ಅತ್ಯಂತ ಘೋರವಾಗಿರುವುದರಿಂದ ಮೊದಲಿದ್ದ ಸಮೃದ್ಧಿಯ ಗುರುತೇ ಕಾಣಿಸದೆ ಹೋಗುವುದು.
TSK
TSK · ಯೆಶಾಯ 24:20
Treasury of Scripture Knowledge references in ಕನ್ನಡ IRV.
ಅವರು ದಿಕ್ಕುತೋರದವರಾಗಿ ಸುತ್ತುತ್ತಾ, ಕುಡುಕರಂತೆ ಹೊಯ್ದಾಡುತ್ತಿದ್ದರು.
ಆದರೆ ದ್ರೋಹಿಗಳೂ ಮತ್ತು ಪಾಪಿಗಳೂ ಒಟ್ಟಾಗಿ ನಾಶವಾಗುವರು. ಹೌದು, ಯೆಹೋವನನ್ನು ತೊರೆದವರು ನಾಶವಾಗುವರು.
ಯೆಹೋವನು ಅವರ ಅಂತರಾತ್ಮದಲ್ಲಿ ವಕ್ರಬುದ್ಧಿಯನ್ನು ಕಲ್ಪಸಿದ್ದಾನೆ. ಅಮಲೇರಿದವನು ಕಕ್ಕುತ್ತಾ ಓಡಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ.
ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು, ನನ್ನ ಕಡೆಯಿಂದ ಒಯ್ಯಲ್ಪಟ್ಟಿದೆ. ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ, ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀ.
ಪರ್ವತಗಳನ್ನು ನೋಡಿದೆನು, ಆಹಾ, ನಡುಗುತ್ತಿದ್ದವು, ಎಲ್ಲಾ ಗುಡ್ಡಗಳೂ ಅಲ್ಲಕಲ್ಲೋಲವಾಗಿದ್ದವು.
ಇದಲ್ಲದೆ ನನಗೆ ಈ ಅಪ್ಪಣೆಯಾಯಿತು, ನೀನು ಅವರಿಗೆ ನುಡಿಯತಕ್ಕದ್ದೇನೆಂದರೆ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; ಆ ನನ್ನ ರೋಷವನ್ನು ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.”
ಆತನ ಕೈ, ನನ್ನ ದ್ರೋಹಗಳನ್ನು ನನ್ನ ಮೇಲೆ ನೊಗವು ಇರುವಂತೆ ನನ್ನನ್ನು ಬಿಗಿದಿದೆ. ಆ ದ್ರೋಹಗಳು ಹುರಿಗೊಂಡು ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ನನ್ನ ಬಲವನ್ನು ಕುಂದಿಸಿದ್ದಾನೆ; ನಾನು ಎದುರಿಸಲಾರದವರ ಕೈಗೆ ಕರ್ತನು ನನ್ನನ್ನು ಸಿಕ್ಕಿಸಿದ್ದಾನೆ.
ಇಸ್ರಾಯೇಲರೇ, ಯೆಹೋವನ ವಾಕ್ಯವನ್ನು ಕೇಳಿರಿ; ಯೆಹೋವನು ದೇಶನಿವಾಸಿಗಳ ಮೇಲೆ ವಿವಾದ ಹಾಕಿದ್ದಾನೆ. ಏಕೆಂದರೆ ಪ್ರೀತಿ, ಸತ್ಯ, ದೇವಜ್ಞಾನಗಳು ದೇಶದಲ್ಲಿಲ್ಲ.
¶ ಆಗ ನನ್ನ ಸಂಗಡ ಮಾತನಾಡುತ್ತಿದ್ದ ದೂತನು ಬಂದು, “ಕಂಡು ಬರುತ್ತಿರುವ ಆ ವಸ್ತು ಏನೆಂದು ನೋಡು” ಎಂಬುದಾಗಿ ನನಗೆ ಹೇಳಿದನು.
¶ ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ.