ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ, ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ.
TSK
TSK · ಯೆಶಾಯ 24:21
Treasury of Scripture Knowledge references in ಕನ್ನಡ IRV.
ಇನ್ನು ಸ್ವಲ್ಪ ಕಾಲದೊಳಗೆ ನಿಮ್ಮ ಮೇಲಿನ ಉಗ್ರವು ತೀರಿ, ನನ್ನ ಕೋಪವು ಅವರ ನಾಶನಕ್ಕಾಗುವುದು.”
ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವುದು; ಮೋವಾಬ್ಯರೋ ತಿಪ್ಪೆಗುಂಡಿಯ ಕೆಸರಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾವಿದ್ದಲ್ಲೇ ತುಳಿಯಲ್ಪಡುವರು.
¶ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
ನೀನು ತೆರೆದ ಬಯಲಿನಲ್ಲಿ ಬೀಳುವಿ. ಏಕೆಂದರೆ ನಾನೇ ಅಪ್ಪಣೆ ಕೊಟ್ಟಿದ್ದೇನೆ’ ಎಂದು ಕರ್ತನಾದ ಯೆಹೋವನ ನುಡಿಯುತ್ತಾನೆ.
ಐಗುಪ್ತ್ಯವು ಹಾಳಾಗುವುದು, ಎದೋಮ್, ಹಾಳಾದ ಬೆಂಗಾಡಾಗುವುದು, ಏಕೆಂದರೆ ಅವರು ಯೆಹೂದ್ಯರನ್ನು ಹಿಂಸಿಸಿ, ಅವರ ದೇಶದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.
¶ ಯೆರೂಸಲೇಮಿನ ಮೇಲೆ ಯುದ್ಧ ಮಾಡಿದ ಸಕಲ ಜನಾಂಗಗಳಿಗೂ ಯೆಹೋವನು ಈ ವ್ಯಾಧಿಯು ಬರುವಂತೆ ಮಾಡುವನು, ಹೆಜ್ಜೆಯ ಮೇಲೆ ನಿಂತ ಹಾಗೆಯೇ ಅವರ ಮಾಂಸವು ಕೊಳೆತು ಹೋಗುವುದು, ಕಣ್ಣು ಕುಣಿಯಲ್ಲೇ ಇಂಗುವುದು, ನಾಲಿಗೆಯು ಬಾಯಲ್ಲೇ ಕ್ಷಯಿಸುವುದು.
ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”
ರಾಜರ ಮಾಂಸವನ್ನೂ, ಸಹಸ್ರಾಧಿಪತಿಗಳ ಮಾಂಸವನ್ನೂ, ಪರಾಕ್ರಮಶಾಲಿಗಳ ಮಾಂಸವನ್ನೂ, ಕುದುರೆಗಳ ಮಾಂಸವನ್ನೂ, ಕುದುರೆ ಸವಾರರ ಮಾಂಸವನ್ನೂ, ಸ್ವತಂತ್ರರೂ, ದಾಸರೂ, ಶ್ರೇಷ್ಠರು ಮತ್ತು ಕನಿಷ್ಠರು ಇವರೆಲ್ಲರ ಮಾಂಸವನ್ನೂ ತಿನ್ನುವುದಕ್ಕೆ ಬನ್ನಿರಿ” ಎಂದು ಹೇಳಿದನು.