ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು: “ಯೆಹೋವನಿಗೆ ಕೀರ್ತನೆ ಹಾಡಿರಿ, ಆತನು ಮಹೋನ್ನತನಾದ ದೇವರಾಗಿದ್ದಾನೆ. ಕುದುರೆಗಳನ್ನೂ, ರಾಹುತರನ್ನೂ ಸಮುದ್ರದಲ್ಲಿ ಮುಳುಗಿಸಿ ನಾಶಮಾಡಿದನು.”
TSK
TSK · ಯೆಶಾಯ 24:23
Treasury of Scripture Knowledge references in ಕನ್ನಡ IRV.
ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.
ಆಕಾಶದ ತಾರೆಗಳೂ, ನಕ್ಷತ್ರ ರಾಶಿಗಳೂ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ಪ್ರಕಾಶಿಸುವುದಿಲ್ಲ.
ಏಕೆಂದರೆ ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಆಜ್ಞೆಕೊಡುವಾತನು, ಯೆಹೋವನು ನಮ್ಮ ರಾಜನು, ಆತನೇ ನಮ್ಮನ್ನು ರಕ್ಷಿಸುವನು.
ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.
¶ “ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ.
ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.
ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಗುಂದುತ್ತವೆ.
ಆ ಊನವಾದ ಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು, ಯೆಹೋವನು ಚೀಯೋನ್ ಪರ್ವತದಲ್ಲಿ ಈ ದಿನದಿಂದ ಎಂದೆಂದಿಗೂ ಅವರ ರಾಜನಾಗಿರುವನು.
‹“ಪರಲೋಕದಲ್ಲಿರುವ ನಮ್ಮ ತಂದೆಯೇ,› ‹ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ.› ‹ನಿನ್ನ ರಾಜ್ಯವು ಬರಲಿ.› ‹ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ› ‹ಭೂಲೋಕದಲ್ಲಿಯೂ ನೆರವೇರಲಿ.›
¶ ‹ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ;› ‹“‘ಸೂರ್ಯನು ಕತ್ತಲಾಗಿ ಹೋಗುವನು.›
¶ ಆತನು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾಭೂಕಂಪ ಉಂಟಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು.
¶ ಆನಂತರ ನಾನು ನೋಡಲಾಗಿ ಯಜ್ಞದ ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವುದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.
ತರುವಾಯ ಬಹುದೊಡ್ಡ ಜನರ ಸಮೂಹದ ಶಬ್ದವು ಜಲಪ್ರವಾಹದ ಘೋಷದಂತೆಯೂ ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದೆನು. ಅದು, “ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ.
ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.