ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.
TSK
TSK · ಯೆಶಾಯ 24:5
Treasury of Scripture Knowledge references in ಕನ್ನಡ IRV.
ನಿನ್ನ ಮನೆಯಲ್ಲಿ ಹುಟ್ಟಿದವನಿಗೂ, ನೀನು ಕ್ರಯಕ್ಕೆ ತೆಗೆದುಕೊಂಡವನಿಗೂ ತಪ್ಪದೆ ಸುನ್ನತಿಯಾಗಬೇಕು. ಹೀಗೆ ನಾನು ಮಾಡುವ ಒಡಂಬಡಿಕೆಯ ಗುರುತು ನಿಮ್ಮ ಶರೀರದಲ್ಲೇ ಇದ್ದು, ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವುದು.
¶ “‘ಈ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು; ಹಾಗೆ ನಡೆದರೆ ನಾನು ನಿಮ್ಮನ್ನು ಯಾವ ದೇಶಕ್ಕೆ ಬರಮಾಡಿ ಅದನ್ನು ನಿವಾಸಕ್ಕಾಗಿ ಕೊಡುತ್ತೇನೋ ಆ ದೇಶವು ನಿಮ್ಮನ್ನು ತ್ಯಜಿಸುವುದಿಲ್ಲ.
¶ “‘ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇಶವು ಅಪವಿತ್ರವಾಗುವುದಿಲ್ಲ. ರಕ್ತವು ದೇಶವನ್ನು ಅಪವಿತ್ರ ಮಾಡುವುದು. ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.
ಆತನು ಅವರ ವಿಷಯದಲ್ಲಿ ಹೀಗೆ ಅಂದುಕೊಂಡನು, “ನಾನು ಅವರಿಗೆ ವಿಮುಖನಾಗಿ ಅವರಿಗೆ ಪ್ರಾಪ್ತವಾಗುವ ಗತಿಯನ್ನು ನೋಡುವೆನು. ಅವರು ಸತ್ಯವನ್ನು ತಿಳಿದೂ ಅದನ್ನು ಅನುಸರಿಸದೆ, ದ್ರೋಹಿಗಳಾದ ಮಕ್ಕಳಾಗಿದ್ದಾರೆ.
ಹೀಗೆ ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲರೊಡನೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೆಲವು ನಿಬಂಧನೆಗಳನ್ನು ವಿಧಿಸಿದನು.
¶ ಇಸ್ರಾಯೇಲರ ಈ ದುರ್ಗತಿಗೆ, ಅವರ ದುರ್ನಡತೆಯೇ ಕಾರಣ. ಹೇಗೆಂದರೆ ಅವರು ತಮ್ಮನ್ನು ಐಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ, ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ಭಯಪಡದೆ, ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು.
ಅವರು ತಮ್ಮ ಪೂರ್ವಿಕರ ಕಾಲದಲ್ಲಿ ಐಗುಪ್ತದೇಶವನ್ನು ಬಿಟ್ಟುಬಂದರೂ ತಮ್ಮ ಪಾಪಗಳನ್ನು ಬಿಡದೆ ಇಂದಿನವರೆಗೂ ತಮ್ಮ ಪಾಪಗಳಿಂದ ನನ್ನನ್ನು ರೇಗಿಸುತ್ತಾ ಬಂದದ್ದೇ ಇದಕ್ಕೆ ಕಾರಣ” ಎಂದು ಹೇಳಿಸಿದನು.
ಆದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದ್ಯರ ಮೇಲಿದ್ದ ಯೆಹೋವನ ಉಗ್ರಕೋಪವು ಇಳಿಯಲಿಲ್ಲ.
¶ “ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ, ನಿನ್ನ ಕಡೆಗೆ ತಿರುಗಿಕೊಳ್ಳಲು ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ, ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.
ಅದು ರಾಜಶಾಸನದಂತೆ ಇರುವುದೆಂದು ಇಸ್ರಾಯೇಲನಿಗೂ ಮಾತುಕೊಟ್ಟನು.
ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.
ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.
ಏಕೆಂದರೆ ನಮ್ಮ ತಪ್ಪುಗಳು ನಿನ್ನ ದೃಷ್ಟಿಗೆ ಹೆಚ್ಚಾಗಿ ಬಿದ್ದಿವೆ, ನಮ್ಮ ಪಾಪಗಳು ನಮ್ಮ ವಿರುದ್ಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ತಪ್ಪುಗಳು ನಮ್ಮ ಸಂಗಡಲೇ ಇವೆ, ನಮ್ಮ ಅಪರಾಧಗಳನ್ನು ನಾವೇ ಬಲ್ಲೆವು.
ನನ್ನ ಮಾತುಗಳನ್ನು ಕೇಳದಿದ್ದ ತಮ್ಮ ಪೂರ್ವಿಕರ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು, ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸಿದ್ದಾರೆ. ಇಸ್ರಾಯೇಲ್ ವಂಶದವರೂ ಮತ್ತು ಯೆಹೂದ ವಂಶದವರೂ ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.
ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ಪದವಾಯಿತು; ಇದಲ್ಲದೆ ಹೇಯವೂ, ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡಿದೆನು.
¶ “‘ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು’ ಅಂದುಕೊಂಡೆನು.
“ನರಪುತ್ರನೇ, ಆ ನಾಡಿಗೆ ಹೀಗೆ ಹೇಳು, ‘ದೇವರ ಕೋಪದ ಈ ದಿನದಲ್ಲಿ ನೀನು ಶುದ್ಧಿಯಾಗದ ದೇಶ, ಮಳೆಯಿಲ್ಲದ ದೇಶ.’
ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು.
ಕರ್ತನಾದ ನಮ್ಮ ದೇವರ ಮಾತನ್ನು ಕೇಳಲಿಲ್ಲ, ತನ್ನ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ಗೊತ್ತು ಮಾಡಿದ ಧರ್ಮಮಾರ್ಗದಲ್ಲಿ ನಡೆಯಲಿಲ್ಲ.
ಏಳಿರಿ, ತೊಲಗಿರಿ, ಈ ದೇಶವು ನಿಮ್ಮ ಸುಖವಸತಿಯಾಗದು. ನಾಶನವನ್ನು, ವಿಪರೀತ ನಾಶನವನ್ನು ಉಂಟುಮಾಡುವ ಹೊಲಸು ಇದಕ್ಕೆ ಅಂಟಿಕೊಂಡಿದೆ.
ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.
¶ ಹೀಗಿದ್ದರೂ ಮೊದಲನೆಯ ಒಡಂಬಡಿಕೆಗೂ ದೇವಾರಾಧನೆಯ ವಿಧಿವಿಧಾನಗಳಿದ್ದವು ಮತ್ತು ಇಹಲೋಕ ಸಂಬಂಧವಾದ ದೇವಾಲಯವಿತ್ತು.