TSK

TSK · ಯೆಶಾಯ 25:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅನಂತರ ಆತನು ಸಿಟ್ಟಾಗಿ, ಕೋಪಾವೇಶದಿಂದ ಅವರನ್ನು ಕಳವಳಗೊಳಿಸಿ,

ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.

ಹೀಗಿರಲು ಯೆಹೋವನು ತನ್ನ ಜನರ ಮೇಲೆ ಕೋಪಗೊಂಡು, ಅವರ ಮೇಲೆ ಕೈಯೆತ್ತಿ, ಅವರನ್ನು ಹೊಡೆದುಬಿಡುವನು. ಆಗ ಬೆಟ್ಟಗಳು ನಡಗುವವು. ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೇ ಕೈಯೆತ್ತಿಯೇ ಇರುವುದು.

¶ ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.

ಮೋವಾಬ್ಯರ ಅಹಂಕಾರವನ್ನು, ಗರ್ವವನ್ನು, ಕೊಚ್ಚಿಕೊಳ್ಳುವಿಕೆಯನ್ನು, ಕೋಪವನ್ನು ನಾವು ಕೇಳಿದ್ದೇವೆ. ಅವರು ಕೊಚ್ಚಿಕೊಳ್ಳುವುದೆಲ್ಲಾ ಬರೀ ವ್ಯರ್ಥವೇ.

ಮೋಡಗಳು ಒಣನೆಲದ ಕಾವನ್ನು ತಂಪಾಗಿಸುವಂತೆ ನೀನು ಅನ್ಯರ ಗದ್ದಲವನ್ನು ತಗ್ಗಿಸುವಿ; ಮೋಡದ ನೆರಳಿನಿಂದ ಬಿಸಿಲು ಹೇಗೆ ಕಡಿಮೆಯಾಗುವುದೋ ಹಾಗೆ ನಿನ್ನಿಂದ ಭೀಕರರ ಉತ್ಸಾಹ ಗಾನವು ಕ್ರಮೇಣ ನಿಂತುಹೋಗುವುದು.

ನನ್ನನ್ನು ತೊರೆದು, ಮನಸ್ಸು ಬಂದ ಹಾಗೆ ದುರ್ಮಾರ್ಗದಲ್ಲಿ ನಡೆಯುವ ಜನರನ್ನು ನಾನು ದಿನವೆಲ್ಲಾ ಕೈಚಾಚಿ ಕರೆದೆನು.

ಮೋವಾಬು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿದ್ದರಿಂದ ಅದು ಹಾಳಾಗಿ ಇನ್ನು ಜನಾಂಗವೆನಿಸಿಕೊಳ್ಳದು.”

ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ, “ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನ್ನ ವಿರುದ್ಧವಾಗಿದ್ದೇನೆ; ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ.

ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.

ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.

ರಾಜರ ಮಾಂಸವನ್ನೂ, ಸಹಸ್ರಾಧಿಪತಿಗಳ ಮಾಂಸವನ್ನೂ, ಪರಾಕ್ರಮಶಾಲಿಗಳ ಮಾಂಸವನ್ನೂ, ಕುದುರೆಗಳ ಮಾಂಸವನ್ನೂ, ಕುದುರೆ ಸವಾರರ ಮಾಂಸವನ್ನೂ, ಸ್ವತಂತ್ರರೂ, ದಾಸರೂ, ಶ್ರೇಷ್ಠರು ಮತ್ತು ಕನಿಷ್ಠರು ಇವರೆಲ್ಲರ ಮಾಂಸವನ್ನೂ ತಿನ್ನುವುದಕ್ಕೆ ಬನ್ನಿರಿ” ಎಂದು ಹೇಳಿದನು.