ಇಂಥವರ ಬಾಯೆಂಬ ಕತ್ತಿಯಿಂದಲೂ, ಬಲಿಷ್ಠರ ಕೈಯಿಂದಲೂ ದಿಕ್ಕಿಲ್ಲದವರನ್ನು ರಕ್ಷಿಸುತ್ತಾನೆ.
TSK
TSK · ಯೆಶಾಯ 25:4
Treasury of Scripture Knowledge references in ಕನ್ನಡ IRV.
ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.
ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.
ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.
ನಾನು ನಿನ್ನ ಕಟ್ಟಳೆಗಳನ್ನು ಅಪ್ಪಿಕೊಂಡಿದ್ದೇನೆ, ಯೆಹೋವನೇ, ನನಗೆ ಆಶಾಭಂಗಪಡಿಸಬೇಡ.
ಅದು ಹಗಲಿನ ಬಿಸಿಲಿನಲ್ಲಿ ನೆರಳನ್ನೂ, ಸಣ್ಣ ದೊಡ್ಡ ಮಳೆಗಳಲ್ಲಿ ಆಶ್ರಯವನ್ನೂ ಕೊಡುವ ಗುಡಾರವಾಗಿರುವುದು.
ಹೀಗಿರಲು ಜನಾಂಗಗಳ ರಾಯಭಾರಿಗಳಿಗೆ ಏನು ಉತ್ತರ ಕೊಡಬೇಕೆಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಬಾಧೆಪಟ್ಟ ಆತನ ಜನರು ಅದನ್ನು ಆಶ್ರಯಿಸಿಕೊಳ್ಳುವರು ಎಂಬುದೇ.
ಇಲ್ಲದಿದ್ದರೆ ಅವರು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನನ್ನು ಆಶ್ರಯಿಸಲಿ, ನನ್ನ ಸಂಗಡ ಸಮಾಧಾನ ಮಾಡಿಕೊಳ್ಳಲಿ.
ದೀನರು ಯೆಹೋವನಲ್ಲಿ ಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲರ ಸದಮಲಸ್ವಾಮಿಯಲ್ಲಿ ಉಲ್ಲಾಸಿಸುವರು.
ನನ್ನ ಜನರು ಸಮಾಧಾನದ ನಿವಾಸದಲ್ಲಿಯೂ, ನಿರ್ಭಯವಾದ ನಿಲಯಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
ಇವನಿಗೆ ಗಿರಿದುರ್ಗಗಳೇ, ಆಶ್ರಯ ಅನ್ನವು ಉಚಿತವಾಗಿ ಒದಗುವುದು, ನೀರು ನಿಸ್ಸಂದೇಹವಾಗಿ ದೊರಕುವುದು.
¶ ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.
ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.
ಆದಕಾರಣ, ನೀನು ಸುಣ್ಣಬಳಿಯುವವರಿಗೆ ಹೀಗೆ ನುಡಿ, ‘ವಿಪರೀತ ಮಳೆಯಾಗಿ ಗೋಡೆಯು ಬಿದ್ದುಹೋಗುವುದು, ಆನೆಕಲ್ಲುಗಳು ಸುರಿಯುವವು; ಬಿರುಗಾಳಿಯು ಗೋಡೆಯನ್ನು ಒಡೆದುಹಾಕುವುದು.’
‹ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ.›