TSK

TSK · ಯೆಶಾಯ 25:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಬಳ್ಳಿಯಂತೆ ಬಿಸಿಲಿನಲ್ಲಿಯೂ ಹಸಿಯಾಗಿದ್ದು, ತೋಟದಲ್ಲೆಲ್ಲಾ ಕವಲೊಡೆದು ಹರಡಿ

ಮ್ಲೇಚ್ಛರು, “ಅವರ ದೇವರು ಎಲ್ಲಿ?” ಎಂದು ಕೇಳುವುದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು, ಜನಾಂಗಗಳಿಗೆ ಗೊತ್ತಾಗಲಿ.

ಅವನು ಹೇಳುವುದೇನೆಂದರೆ, “ನನ್ನ ಅಧಿಪತಿಗಳೆಲ್ಲಾ ಅರಸರಲ್ಲವೇ?

¶ ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.

ಆದರೆ ನೀನಾದರೋ ನಿನ್ನ ಸಮಾಧಿಗೆ ದೂರವಾಗಿ ಕೆಟ್ಟ ಕೊಂಬೆಯಂತೆ ಬಿಸಾಡಲ್ಪಟ್ಟಿದ್ದೀ; ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಹೊದಿಕೆಯಂತೆಯೂ,

ಯೆಹೋವನು ನನಗೆ ಹೇಳುವುದೇನೆಂದರೆ, “ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ, ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು” ಎಂಬುದೇ.

ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ಝಳವೂ ಬಿಸಿಲೂ ಬಡಿಯುವುದಿಲ್ಲ. ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರು ಸಿಕ್ಕುವ ಒರತೆಗಳ ಬಳಿಯಲ್ಲಿ ನಡೆಸುವನು.

ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ ಅದು ನನ್ನ ಅಪ್ಪಣೆಯಿಂದ ಅಲ್ಲ; ಯಾರು ನಿನ್ನ ಮೇಲೆ ವ್ಯಾಜ್ಯವಾಡುತ್ತಾರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು.

“ನನ್ನ ಸ್ವತ್ತನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ, ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ, ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವುದರಿಂದ

ಬಾಬೆಲ್ ಆಕಾಶದ ತನಕ ಬೆಳೆದು ಎತ್ತರವಾಗಿಯೂ ಮತ್ತು ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ, ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು.’ ಇದು ಯೆಹೋವನ ನುಡಿ.”

ನೀನು ಮೇಲೇರಿ ಬಿರುಗಾಳಿಯಂತೆ ಹೊರಟು ಬರುವೆ. ನಿನ್ನ ಎಲ್ಲಾ ದಂಡುಗಳೂ ಅನೇಕ ಜನರ ಸಹಿತವಾಗಿ ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವುದು.’”

¶ “ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು.

¶ ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿಯಿರಿ” ಎಂದು ಹೇಳಿತು.