ಯೆಹೋವನೇ, ನಿನ್ನ ವೈರಿಗಳು ನಿಂದಿಸುತ್ತಾರೆ; ನಿನ್ನ ಅಭಿಷಿಕ್ತನನ್ನು ಹೆಜ್ಜೆ ಹೆಜ್ಜೆಗೂ ಅಪಮಾನ ಮಾಡುತ್ತಾರೆ.
TSK
TSK · ಯೆಶಾಯ 25:8
Treasury of Scripture Knowledge references in ಕನ್ನಡ IRV.
ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ, ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.
ಯೆಹೋವನು ವಿಮೋಚಿಸಿದವರು ಹಿಂದಿರುಗಿ, ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.
ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.
ನಿವಾಸಿಗಳು ತ್ಯಜಿಸಿದ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು, ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರದವರೆಗೆ ಉಲ್ಲಾಸಕರವಾಗುವಂತೆ ಮಾಡುವೆನು.
ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರಲ್ಲಿ ಹರ್ಷಗೊಳ್ಳುವೆನು. ರೋದನ ಶಬ್ದವೂ, ಪ್ರಲಾಪಧ್ವನಿಯೂ ಅಲ್ಲಿ ಇನ್ನು ಕೇಳಿಸವು.
ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.
¶ ‹“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.›
ನಶಿಸಿಹೋಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವುದು.
¶ ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,
ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.
ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.