ಇದಲ್ಲದೆ ಅಮ್ಮೋನಿಯರು ಯೊರ್ದನ್ ಹೊಳೆಯನ್ನು ದಾಟಿ, ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಾಯೇಲರಿಗೆ ಬಹಳ ಕಷ್ಟವಾಯಿತು.
TSK
TSK · ಯೆಶಾಯ 26:16
Treasury of Scripture Knowledge references in ಕನ್ನಡ IRV.
ಅದಕ್ಕೆ ಹನ್ನಳು “ಸ್ವಾಮೀ, ಹಾಗಲ್ಲ; ನಾನು ಬಹು ದುಃಖಪೀಡಿತಳು; ದ್ರಾಕ್ಷಾರಸವನ್ನಾದರೂ ಬೇರೆ ಯಾವ ಮದ್ಯವನ್ನಾದರೂ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಯೆಹೋವನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ.
ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು
ನಾನು ಭಜನೋತ್ಸವದಲ್ಲಿ ಸೇರಿ, ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ, ಸ್ತೋತ್ರಪದಗಳನ್ನು ಹಾಡುತ್ತಾ, ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು, ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.
ದೇವರಿಗೆ ಮೊರೆಯಿಡುವೆನು, ಕೂಗಿ ಮೊರೆಯಿಡುವೆನು; ಆತನು ನನಗೆ ಕಿವಿಗೊಡುವನು.
ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ, ಪುನಃ ಆತನ ಪ್ರಸನ್ನತೆಯನ್ನು ಬಯಸಿ,
ನನ್ನ ಚಿಂತೆಗಳನ್ನು ಆತನ ಮುಂದೆ ಬಿಚ್ಚುವೆನು, ನನ್ನ ಕಷ್ಟವನ್ನು ಆತನಿಗೆ ಅರಿಕೆಮಾಡುವೆನು.
ಅವರು ನನ್ನ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ, “ಎದ್ದು ನಮ್ಮನ್ನು ಉದ್ಧರಿಸು” ಎಂದು ಮೊರೆಯಿಡುವರು.
ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು.
ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ, ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೆ ನನ್ನನ್ನು ಆಶ್ರಯಿಸುವರು.
‹ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.›