¶ ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.
TSK
TSK · ಯೆಶಾಯ 26:19
Treasury of Scripture Knowledge references in ಕನ್ನಡ IRV.
¶ ಯೋಸೇಫ್ ಕುಲಗಳ ವಿಷಯದಲ್ಲಿ, “ಅವರ ಸೀಮೆಗೆ ಯೆಹೋವನ ಆಶೀರ್ವಾದವಾಗಲಿ. ಮೇಲಣ ಆಕಾಶದಿಂದುಂಟಾಗುವ ಮಂಜು, ಕೆಳಗಣ ಸಾಗರದ ಸೆಲೆ,
ನೆಲದಲ್ಲಿ ಅದರ ಬೇರು ಹಳೆಯದಾದರೂ, ಮಣ್ಣಿನಲ್ಲಿ ಸತ್ತರೂ,
ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಬಾಯಿಯ ಅಂಗಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.
ಸಮಾಧಿಯಲ್ಲಿ ನಿನ್ನ ಕೃಪೆಯನ್ನೂ, ನಾಶನಲೋಕದಲ್ಲಿ ನಿನ್ನ ಸತ್ಯತೆಯನ್ನು ಸಾರುವುದುಂಟೋ?
ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.
ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.
¶ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಲು, ಆತನು ತನ್ನ ಆತ್ಮದ ಮೂಲಕ ನನ್ನನ್ನು ಒಯ್ದು ಎಲುಬುಗಳಿಂದ ತುಂಬಿದ್ದ ಒಂದು ಕಣಿವೆಯಲ್ಲಿ ಇಳಿಸಿದನು.
ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ, ಮಾಂಸವನ್ನು ತಂದು, ಚರ್ಮವನ್ನು ಹೊದಿಸಿ, ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿರಿ.’”
ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು.
ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಅರಳುವುದು; ಲೆಬನೋನಿನ ದೇವದಾರು ಮರಗಳ ಹಾಗೆ ಬೇರು ಬಿಟ್ಟುಕೊಳ್ಳುವುದು.
ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು;
‹ಅದಕ್ಕೆ ಆಶ್ಚರ್ಯಪಡಬೇಡಿರಿ. ಒಂದು ಕಾಲ ಬರುತ್ತದೆ, ಆಗ›‹ಸಮಾಧಿಗಳಲ್ಲಿರುವವರೆಲ್ಲಾ ಆತನ ಸ್ವರವನ್ನು ಕೇಳಿ,›
ಇದಲ್ಲದೆ ನೀತಿವಂತರಿಗೂ ಮತ್ತು ಅನೀತಿವಂತರಿಗೂ ಪುನರುತ್ಥಾನವಾಗುವುದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ.
ಆದಾಮನಿಂದ ಹೇಗೆ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಯೇಸು ಕ್ರಿಸ್ತನಿಂದ ಎಲ್ಲರೂ ಬದುಕುವವರಾದರು.
ಆತನನ್ನೂ ಆತನ ಪುನರುತ್ಥಾನದಲ್ಲಿರುವ ಶಕ್ತಿಯನ್ನೂ, ಆತನ ಬಾಧೆಗಳಲ್ಲಿ ಪಾಲುಗಾರನಾಗಿರುವ ಪದವಿಯನ್ನೂ ತಿಳಿದುಕೊಂಡು ಆತನ ಮರಣದ ವಿಷಯದಲ್ಲಿ ಆತನಂತೆ ರೂಪಾಂತರಗೊಳ್ಳಬೇಕೆಂಬುದೇ ನನ್ನ ಬಯಕೆಯಾಗಿದೆ.
ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.
ಸತ್ತವರಲ್ಲಿ ಉಳಿದವರು ಆ ಸಾವಿರ ವರ್ಷಗಳ ಮುಗಿಯುವವರೆಗೂ ಜೀವಿತರಾಗಿ ಏಳಲಿಲ್ಲ. ಇದೇ ಮೊದಲನೇಯ ಪುನರುತ್ಥಾನವು.