TSK

TSK · ಯೆಶಾಯ 26:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ನನ್ನ ಜೀವದಾಣೆ, ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರುವುದು.

ನೀತಿವಂತನಿಗೆ ಫಲವುಂಟೆಂತಲೂ, ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.

ನಾನು ಹಾಸಿಗೆಯ ಮೇಲಿದ್ದುಕೊಂಡು ನಿನ್ನನ್ನು ಸ್ಮರಿಸುವಾಗ, ರಾತ್ರಿಯ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುತ್ತಿರುವೆನು.

ಇಕ್ಕಟ್ಟಿನಲ್ಲಿ ಸ್ವಾಮಿಯನ್ನು ಕರೆದೆನು; ಬೇಸರವಿಲ್ಲದೆ ರಾತ್ರಿಯೆಲ್ಲಾ ಕೈಚಾಚಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಯನ್ನು ಹೊಂದಲೊಲ್ಲದೆ ಇತ್ತು.

ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.

ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ; ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ, ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ.

ರಾತ್ರಿಯಲ್ಲಿ ಹಾಸಿಗೆಯ ಮೇಲೆ ನನ್ನ ಪ್ರಾಣಪ್ರಿಯನನ್ನು ಹುಡುಕಿದೆನು, ಎಷ್ಟು ಹುಡುಕಿದರೂ ಸಿಕ್ಕಲಿಲ್ಲ.

ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ, ಅಶೇರವೆಂಬ ವಿಗ್ರಹಸ್ತಂಭಗಳನ್ನೂ, ಸೂರ್ಯಸ್ತಂಭಗಳನ್ನೂ ಪ್ರತಿಷ್ಠಿಸದೆ ನಾಶಮಾಡಿ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವಂತೆ ಮಾಡಿದನು ಮತ್ತು ಅವರ ಪಾಪ ಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದಾಗಿದೆ.

ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ, ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೆ ನನ್ನನ್ನು ಆಶ್ರಯಿಸುವರು.

¶ ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು.

ಅದೇ ಗಳಿಗೆಯಲ್ಲಿ ಮಹಾ ಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರನ್ನು ಘನಪಡಿಸಿದರು.