ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ಪುನಃ ಕೂಡಿಸುವನು.
TSK
TSK · ಯೆಶಾಯ 27:12
Treasury of Scripture Knowledge references in ಕನ್ನಡ IRV.
ಐಗುಪ್ತದ ಹಳ್ಳಕ್ಕೆ ಬಂದು ಸಮುದ್ರತೀರವನ್ನು ಸೇರುವುದು. ಇದು ಅದರ ತೆಂಕಣ ಮೇರೆ.
ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವುದಾದರೆ ನಿಮ್ಮ ಜನರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ, ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು’ ಎಂದು ಹೇಳಿರುವೆಯಲ್ಲಾ; ಆ ಮಾತನ್ನು ನೆನಪು ಮಾಡಿಕೊಳ್ಳಿರಿ.
ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ.
ಆದರೂ ಎಣ್ಣೆಯ ಮರದ ಕಾಯಿಗಳನ್ನು ಉದುರಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ, ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲುಹಣ್ಣುಗಳು ಅದರಲ್ಲಿ ಉಳಿದಿರುವುದು” ಎಂದು ಇಸ್ರಾಯೇಲರ ದೇವರಾದ ಯೆಹೋವನು ನುಡಿಯುತ್ತಾನೆ.
ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನೆಂದರೆ, ‘ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು’” ಎಂಬುದೇ.
“ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವ ಪ್ರಕಾರ, ಇಸ್ರಾಯೇಲರನ್ನು ಸಕಲ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕು” ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ, ಎಂದು ಅಪ್ಪಣೆ ಕೊಡುವೆನು.
ಅದೇನೆಂದರೆ, ‹“ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದುಹೋದರೆ ಅವನು ತೊಂಬತ್ತೊಂಬತ್ತನ್ನೂ ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೆಯೇ?›
‹ಇದಲ್ಲದೆ›‹ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ›‹ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.›