“ನೀನು ಬೆಳ್ಳಿಯ ತಗಡಿನಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಕೂಡಿಸುವುದಕ್ಕೂ ಮತ್ತು ದಂಡುಗಳನ್ನು ಹೊರಡಿಸುವುದಕ್ಕೂ ಅವುಗಳನ್ನು ಉಪಯೋಗಿಸಬೇಕು.
TSK
TSK · ಯೆಶಾಯ 27:13
Treasury of Scripture Knowledge references in ಕನ್ನಡ IRV.
ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ ಮತ್ತು ಎಲೀಯೆಜೆರ್ ಎಂಬ ಯಾಜಕರು ತುತ್ತೂರಿಗಳನ್ನು ಊದುತ್ತಾ ದೇವ ಮಂಜೂಷದ ಮುಂದೆ ಹೋಗುವವರು. ಓಬೇದೆದೋಮ್ ಮತ್ತು ಯೆಹೀಯ ಎಂಬುವವರು ಮಂಜೂಷದ ದ್ವಾರಪಾಲಕರಾಗಿದ್ದರು.
ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.
ಹೊರಟು ಬಂದ ಬಹು ಜನಾಂಗದವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು.
ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
ಇದಲ್ಲದೆ ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಮಾರ್ಗವು ಹೇಗೆ ಸಿದ್ಧವಾಯಿತೋ ಹಾಗೆಯೇ ಅಶ್ಶೂರದಿಂದ, ತಪ್ಪಿಸಿಕೊಂಡು ಬರುವ ಆತನ ಉಳಿದ ಜನರಿಗೆ ಆತನ ರಾಜಮಾರ್ಗವು ಸಿದ್ಧವಾಗುವುದು.
ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, ಬೆಟ್ಟಗಳಲ್ಲಿ ಧ್ವಜವನ್ನು ಹಾರಿಸುವಾಗ ನೋಡಿರಿ, ತುತ್ತೂರಿಯನ್ನೂದುವಾಗ ಕೇಳಿರಿ!
¶ ಆ ದಿನದಲ್ಲಿ, ಐಗುಪ್ತದಿಂದ ಅಶ್ಶೂರಕ್ಕೆ ಹೋಗಲು ರಾಜಮಾರ್ಗವಿರುವುದು. ಅಶ್ಶೂರ್ಯರು ಐಗುಪ್ತಕ್ಕೂ, ಐಗುಪ್ತರು ಅಶ್ಶೂರಕ್ಕೂ ಹೋಗಿ ಬರುವರು. ಐಗುಪ್ತರು ಅಶ್ಶೂರ್ಯರೊಂದಿಗೆ ಯೆಹೋವನನ್ನು ಆರಾಧಿಸುವರು.
‘ಅವರನ್ನು ಒಪ್ಪಿಸಿಬಿಡು’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ’ ಎಂದು ದಕ್ಷಿಣಕ್ಕೂ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ,
¶ “ಅವರ ಕೃತ್ಯಗಳಿಗೂ, ಆಲೋಚನೆಗಳಿಗೂ ತಕ್ಕದ್ದನ್ನು ಮಾಡುವೆನು; ನಾನು ಇನ್ನು ಮುಂದೆ ಸಮಸ್ತ ಜನಾಂಗಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.
ಇವರೆಲ್ಲರನ್ನೂ ಕಾರೇಹನ ಮಗನಾದ ಯೋಹಾನಾನನೂ, ಸಕಲ ಸೇನಾಧಿಪತಿಗಳೂ ಕರೆದುಕೊಂಡು ಐಗುಪ್ತಕ್ಕೆ ಹೋಗಿ ತಹಪನೇಸ್ ಊರಿಗೆ ಸೇರಿದರು. ಯೆಹೋವನ ಮಾತನ್ನು ಕೇಳಲೇ ಇಲ್ಲ.
ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು.
ಗುಬ್ಬಿಗಳಂತೆ ಐಗುಪ್ತದಿಂದಲೂ, ಪಾರಿವಾಳಗಳಂತೆ ಅಶ್ಶೂರದಿಂದಲೂ ಅದರುತ್ತಾ ತ್ವರೆಪಡುವರು; ಅವರು ತಮ್ಮ ತಮ್ಮ ನಿವಾಸಗಳಲ್ಲಿ ವಾಸಿಸುವಂತೆ ಮಾಡುವೆನು; ಇದು ಯೆಹೋವನ ನುಡಿ.
ಯೆಹೂದವೆಂಬ ಬಿಲ್ಲನ್ನು ಬೊಗ್ಗಿಸಿಕೊಂಡಿದ್ದೇನೆ. ಅದರಲ್ಲಿ ಎಫ್ರಾಯೀಮ್ ಎಂಬ ಬಾಣವನ್ನು ಹೂಡಿದ್ದೇನೆ; ಚೀಯೋನೇ, ನಾನು ನಿನ್ನ ಸಂತಾನವನ್ನು ಗ್ರೀಕ್ ಸಂತಾನಕ್ಕೆ ವಿರುದ್ಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯನ್ನಾಗಿ ಮಾಡುವೆನು.
ನಾನು ಅವರನ್ನು ಐಗುಪ್ತ ದೇಶದೊಳಗಿಂದ ಹಿಂದಕ್ಕೆ ಕರೆದುತರುವೆನು; ಅಶ್ಶೂರದಿಂದ ಕೂಡಿಸುವೆನು; ಗಿಲ್ಯಾದ್, ಲೆಬನೋನುಗಳ ಪ್ರಾಂತ್ಯಕ್ಕೆ ಬರಮಾಡುವೆನು; ಅವರಿಗೆ ಸಾಕಾಗುವಷ್ಟು ಸ್ಥಳ ಸಿಕ್ಕದು.
“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
‹“ಕರ್ತನ ಆತ್ಮವು ನನ್ನ ಮೇಲೆ ಅದೆ,› ‹ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು.› ‹ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ,› ‹ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ› ‹ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ›
ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.”
¶ ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ,
¶ ಏಳು ತುತ್ತೂರಿಗಳನ್ನು ಹಿಡಿದಿರುವ ಏಳು ಮಂದಿ ದೇವದೂತರು ತುತ್ತೂರಿಗಳನ್ನು ಊದಲು ಸಿದ್ಧರಾದರು.
ಏಳನೆಯ ದೇವದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತ್ತೂರಿಯನ್ನು ಊದುವುದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ದೇವರ ಮರ್ಮವನ್ನು ತನ್ನ ದಾಸರಾದ ಪ್ರವಾದಿಗಳಿಗೆ ತಿಳಿಸಿದ್ದ ಪ್ರಕಾರ ನೆರವೇರುವುದು” ಎಂದು ಹೇಳಿದನು.