“ನಾನು ಅವರ ವಿರುದ್ಧವಾಗಿ ಏಳುತ್ತೇನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ನಾನು ಬಾಬೆಲಿನಿಂದ ಹೆಸರನ್ನೂ, ಉಳಿದ ಜನರನ್ನೂ, ಆಕೆಯ ಸಂತತಿಯನ್ನೂ ನಿರ್ಮೂಲ ಮಾಡುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
TSK
TSK · ಯೆಶಾಯ 27:7
Treasury of Scripture Knowledge references in ಕನ್ನಡ IRV.
ಇಗೋ, ಸಂಜೆಯಲ್ಲಿ ಹೆದರಿ ಉದಯದೊಳಗಾಗಿ ಇಲ್ಲವಾಗುವರು! ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.
ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು. ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.”
ದೇವರು ಕೆಡವಿದ ಸೊದೋಮ್, ಗೊಮೋರ ಪಟ್ಟಣಗಳಲ್ಲಿಯೂ ಮತ್ತು ಸುತ್ತಣ ಊರುಗಳಲ್ಲಿಯೂ ಹೇಗೋ, ಹಾಗೆಯೇ ಬಾಬೆಲಿನಲ್ಲಿಯೂ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲೆ ನಿಲ್ಲುವುದಿಲ್ಲ.
¶ “ರಾಜನೇ, ನೀನು ಕಂಡದ್ದು ಆಹಾ, ಅದ್ಭುತಪ್ರತಿಮೆ; ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆಯು ನಿನ್ನೆದುರಿಗೆ ನಿಂತಿತ್ತು; ಭಯಂಕರವಾಗಿ ಕಾಣಿಸಿತು.
ನಿನ್ನ ಗಾಯವು ಗುಣಹೊಂದದು, ನಿನ್ನ ಗಾಯವು ತೀವ್ರವೇ. ನಿನ್ನ ವಿನಾಶದ ಸುದ್ದಿಯನ್ನು ಕೇಳಿದವರೆಲ್ಲರೂ ನಿನಗೆ ಚಪ್ಪಾಳೆ ಹಾಕಿ ನಗುತ್ತಾರೆ; ನಿನ್ನ ಕೆಡುಕಿಗೆ ನಿತ್ಯವೂ ಗುರಿಯಾಗದವರು ಯಾರೂ ಇಲ್ಲ.