TSK

TSK · ಯೆಶಾಯ 27:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆತನು ತನ್ನ ಮಹಾಶಕ್ತಿಯಿಂದ ನನ್ನ ಸಂಗಡ ವ್ಯಾಜ್ಯವಾಡುವನೋ? ಇಲ್ಲವೇ ಇಲ್ಲ; ನನ್ನ ವಿಜ್ಞಾಪನೆಯನ್ನು ಗಮನಿಸುವನು.

ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.

ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.

ನಾವು ರೂಪಗೊಂಡಿದ್ದನ್ನು ಆತನು ಬಲ್ಲನು; ನಾವು ಧೂಳಾಗಿದ್ದೇವೆ ಎಂಬುವುದನ್ನು ನೆನಪುಮಾಡಿಕೊಳ್ಳುತ್ತಾನೆ.

¶ “ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.

ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.

ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.

ನಾನು ಸರ್ವದಾ ವ್ಯಾಜ್ಯವಾಡುವುದಿಲ್ಲ, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯನ ಆತ್ಮವೂ, ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.

ನಿನ್ನನ್ನು ಮಾರ್ಗದರ್ಶಿಯಾಗಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡೆಯಲ್ಲಾ.

ಯೆಹೋವನು, “ದೇಶವೆಲ್ಲಾ ಬಟ್ಟಬರಿದಾಗುವುದು, ಆದರೆ ನಾನು ಸಂಪೂರ್ಣವಾಗಿ ಲಯಮಾಡೆನು.

ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು. ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.”

ಆದರೆ ಆ ಲತೆಯು ರೋಷದಲ್ಲಿ ಕೀಳಲ್ಪಟ್ಟು, ನೆಲದ ಮೇಲೆ ಬಿಸಾಡಲ್ಪಟ್ಟಿತು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿ ಕೊಂಬೆಗಳು ಮುರಿದು ಒಣಗಿ ಹೋದವು, ಬೆಂಕಿಯು ಅವುಗಳನ್ನು ನುಂಗಿತು.

ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.

ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವುದು, ಅದರ ಒರತೆಯು ಒಣಗುವುದು. ಶತ್ರುವು ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಮಾಡುವನು.

ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.