ಆದರೆ ನೀವು ಅವರ ಯಜ್ಞವೇದಿಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.
TSK
TSK · ಯೆಶಾಯ 27:9
Treasury of Scripture Knowledge references in ಕನ್ನಡ IRV.
ಅವನು ಯೆಹೋವನ ಆಲಯವನ್ನೂ, ಅರಸನ ಅರಮನೆಯನ್ನೂ ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಹಾಗೂ ಪಟ್ಟಣದ ಮುಖ್ಯ ಕಟ್ಟಡಗಳನ್ನೂ ಸುಟ್ಟುಬಿಟ್ಟನು.
ಯೆಹೂದದ ಎಲ್ಲಾ ಪಟ್ಟಣಗಳೊಳಗಿನಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದುಹಾಕಿಸಿದನು. ಇವನ ಆಳ್ವಿಕೆಯಲ್ಲಿ ರಾಜ್ಯದೊಳಗೆ ಸಮಾಧಾನವಿತ್ತು.
ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.
ಕಷ್ಟಾನುಭವಕ್ಕಿಂತ ಮೊದಲೇ ತಪ್ಪಿಹೋಗುತ್ತಿದ್ದೆನು, ಈಗಲಾದರೋ ನಿನ್ನ ನುಡಿಗಳನ್ನು ಕೈಗೊಳ್ಳುತ್ತೇನೆ.
ಗಾಯಮಾಡುವ ಪೆಟ್ಟುಗಳು ಕೆಟ್ಟದ್ದನ್ನು ತೊಳೆದುಬಿಡುವುದು, ಏಟುಗಳು ಅಂತರಂಗವನ್ನು ಶುದ್ಧಿಮಾಡುವುದು.
“ನೀವು ಇಷ್ಟಪಟ್ಟ ಏಲಾ ಮರಗಳ ನಿಮಿತ್ತ ನಾಚಿಕೆಪಡುವಿರಿ. ಗೊತ್ತು ಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
ಆಗ ಕರ್ತನಾದ ಯೆಹೋವನು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಸ್ತ್ರೀಯರ ಕಲ್ಮಷವನ್ನೂ ಮತ್ತು ಯೆರೂಸಲೇಮಿನ ರಕ್ತದ ಕಲೆಯನ್ನು ತೊಳೆದುಬಿಡುವನು.
ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ಬೊಂಬೆಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಗಳನ್ನು, “ತೊಲಗಿ ಹೋಗಿರಿ” ಎಂದು ಹೊಲೆಯಾದ ಬಟ್ಟೆಯಂತೆ ಬಿಸಾಡುವಿರಿ.
ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ, ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ.
ನನಗೆ ತಿರುಗಿ ಬಿದ್ದು ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಕಳುಹಿಸಿ ಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರು ಮಾಡಿದರೂ, ಅವರು ಇಸ್ರಾಯೇಲ್ ದೇಶಕ್ಕೆ ಸೇರುವುದೇ ಇಲ್ಲ; ನಾನೇ ಯೆಹೋವನು” ಎಂದು ನಿಮಗೆ ಗೊತ್ತಾಗುವುದು.
ಜ್ಞಾನಿಗಳಲ್ಲಿಯೂ ಕೆಲವರು ಅಂತ್ಯಕಾಲದವರೆಗೆ ಬೀಳುತ್ತಿರುವರು. ಆದುದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ನಿಶ್ಚಿತಕಾಲದಲ್ಲೇ ಆಗುವುದು.
ನಿನ್ನ ದೇಶದ ಪಟ್ಟಣಗಳನ್ನು ಹಾಳುಮಾಡಿ, ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.
ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವುದು.” ಎಂದು ಬರೆದಿದೆ.
ಏಕೆಂದರೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವರನ್ನು ಶಿಕ್ಷಿಸುತ್ತಾನೆ. ತಾನು ಮಗನಂತೆ ಸ್ವೀಕರಿಸುವ ಪ್ರತಿಯೊಬ್ಬನನ್ನು ದಂಡಿಸುತ್ತಾನೆ ಎಂಬುದಾಗಿದೆ.