ಇಸ್ರಾಯೇಲರ ದೇವರಾದ ಯೆಹೋವನ ವಾಕ್ಯದ ಮೂಲಕ ತನ್ನ ಸೇವಕನೂ ಗತ್ ಹೇಫೆರಿನವನಾದ ಅಮಿತ್ತೈಯನ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರವಾಗಿ ಮುಂತಿಳಿಸಿದಂತೆ ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಾಯೇಲರ ಮೇರೆಯನ್ನು ಪುನಃ ವಶಪಡಿಸಿಕೊಂಡವನು ಇವನೇ ಆಗಿದ್ದನು.
TSK
TSK · ಯೆಶಾಯ 28:1
Treasury of Scripture Knowledge references in ಕನ್ನಡ IRV.
ಮೂರು ವರ್ಷಗಳ ತರುವಾಯ, ಇಸ್ರಾಯೇಲರ ಅರಸನಾದ ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ಆರನೆಯ ವರ್ಷದಲ್ಲಿ ಅವನು ಸಮಾರ್ಯವನ್ನು ಸ್ವಾಧೀನಮಾಡಿಕೊಂಡನು.
¶ ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು.
ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು, ಸಂಜೆಯಾದ ಮೇಲೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಗತಿಯನ್ನು ಏನೆಂದು ಹೇಳಲಿ!
ಏಕೆಂದರೆ ಅರಾಮಿಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನ. ಅರುವತ್ತೈದು ವರ್ಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನ್ನಿಸಿಕೊಳ್ಳರು.
ಆ ಮಗುವು, ‘ಅಪ್ಪಾ, ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮೊದಲೇ ಅಶ್ಶೂರದ ಅರಸನು ದಮಸ್ಕದ ಆಸ್ತಿಯನ್ನೂ, ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದು ಹೇಳಿದನು.
ಗರ್ವದಿಂದಲೂ, ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ, ಎಫ್ರಾಯೀಮ್ಯರಿಗೂ, ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವುದು. ಅದೇನೆಂದರೆ,
ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟವು ಕಾಲಿನಿಂದ ತುಳಿಯಲ್ಪಡುವುದು.
ವ್ಯಭಿಚಾರ, ದ್ರಾಕ್ಷಾರಸ ಮತ್ತು ಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ.
ನಾನು ಇಸ್ರಾಯೇಲ್ ಮನೆತನದಲ್ಲಿ ಅಸಹ್ಯವನ್ನು ನೋಡಿದ್ದೇನೆ; ಎಫ್ರಾಯೀಮಿನೊಳಗೆ ವ್ಯಭಿಚಾರವು ನಡೆಯುತ್ತದೆ, ಇಸ್ರಾಯೇಲು ಹೊಲೆಯಾಗಿದೆ.
ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವು ಇಟ್ಟ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರು ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ.
¶ ಸಮಾರ್ಯ ಬೆಟ್ಟದಲ್ಲಿನ, ಬಾಷಾನಿನ ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ, ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಜಜ್ಜಿ, ನೀವು ನಿಮ್ಮ ಪತಿಗಳಿಗೆ, “ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.
ದಂತದ ಮಂಚಗಳ ಮೇಲೆ ಮಲಗುತ್ತಾರೆ ಮತ್ತು ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ. ಹಿಂಡಿನ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ತಿನ್ನುತ್ತಾರೆ.
ಸೇನಾಧೀಶ್ವರ ದೇವರಾದ ಯೆಹೋವನ ನುಡಿಯನ್ನು ಕೇಳಿರಿ ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗೆಂದಿದ್ದಾನೆ, “ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು; ಅದರ ಕೋಟೆಗಳನ್ನು ಹಗೆಮಾಡುತ್ತೇನೆ. ಆದುದರಿಂದ ನಾನು ರಾಜಧಾನಿಯನ್ನೂ, ಅದರ ಸಕಲ ಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು”