TSK

TSK · ಯೆಶಾಯ 28:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರಮಿಯ ಭುಜಬಲದಿಂದಲೂ, ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನಿಂದಲೂ ಅವನ ಕೈಗಳ ಬಿಲ್ಲು ಸ್ಥಿರವಾಗಿ ನಿಂತಿರುವುದು. ಅವನ ಕೈಗಳು ಯಾಕೋಬನ ಒಡೆಯನಿಂದ ಬಲಗೊಂಡಿವೆ.

ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ, ಅವನ ಮನಸ್ಸು ಸ್ಥಿರವಾಗಿರುವುದು.

ಆತನು ಆಶ್ರಯವಾಗುವನು; ಆದರೆ ಇಸ್ರಾಯೇಲಿನ ಎರಡು ಮನೆತನಕ್ಕೆ ಎಡವುವ ಕಲ್ಲೂ, ಮುಗ್ಗರಿಸುವ ಬಂಡೆಯೂ ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಪಂಜರವಾಗುವುದು.

ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ, ತಾಮ್ರ, ಮಣ್ಣು, ಬೆಳ್ಳಿಬಂಗಾರಗಳನ್ನು ಚೂರುಚೂರು ಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ. ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ. ಕನಸು ನಿಜ, ಅದರ ಅರ್ಥವು ನಂಬತಕ್ಕದು” ಎಂದು ಹೇಳಿದನು.

ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿರಿ; ಆ ಒಂದೇ ಕಲ್ಲಿನಲ್ಲಿ ಏಳು ಕಣ್ಣುಳ್ಳಾತನ ದೃಷ್ಟಿಯು ಬಿದ್ದಿದೆ; ಇಗೋ ನಾನೇ ಅದರಲ್ಲಿ ಕೆತ್ತನೆ ಕೆತ್ತುವೆನು. ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಒಂದೇ ದಿನದೊಳಗೆ ಈ ದೇಶದ ಪಾಪವನ್ನು ಪರಿಹರಿಸುವೆನು.’

ಯೇಸು ಅವರಿಗೆ, ‹“‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’›

¶ ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, ಹಾಗಾದರೆ ‹“‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ› ‹ಮುಖ್ಯವಾದ ಮೂಲೆಗಲ್ಲಾಯಿತು’› ‹ಎಂದು ಬರೆದಿರುವ ಮಾತೇನು?›

ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ, “ಇಗೋ ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನಲ್ಲಿ ನಂಬಿಕೆಯಿಡುವವನು ಆಶಾಭಂಗಪಡುವುದಿಲ್ಲ” ಎಂಬುದೇ.

ಯೇಸು ಕ್ರಿಸ್ತನೆಂಬ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.

¶ ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು.