TSK

TSK · ಯೆಶಾಯ 28:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹಾಗಾದರೆ, ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಐಗುಪ್ತ ರಾಜ್ಯವು ಸ್ಥಾಪಿತವಾದ ದಿನ ಮೊದಲುಗೊಂಡು ಇಂದಿನವರೆಗೂ ಅಂಥ ಕಲ್ಲಿನ ಮಳೆ ಬಿದ್ದಿರುವುದಿಲ್ಲ.

ನೂಲು ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರ್ಯವನ್ನೂ, ಅಹಾಬನ ಮನೆಯನ್ನೂ ನೆಲಸಮಮಾಡಿದಂತೆ, ಯೆರೂಸಲೇಮನ್ನೂ ಅದರಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿ ಬೋರಲು ಹಾಕುವೆನು.

ನ್ಯಾಯತೀರ್ಪು ನೀತಿಗೆ ತಿರುಗಿಕೊಳ್ಳುವುದು; ಯಥಾರ್ಥಚಿತ್ತರೆಲ್ಲರೂ ಅದನ್ನೇ ಅನುಸರಿಸುವರು.

¶ ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದವರು ಮಾತ್ರ ತಿರುಗಿಕೊಳ್ಳುವರು. ನಾಶವಾಗುವುದಕ್ಕೆ ವಿಧಿಸಲ್ಪಟ್ಟದ್ದು, ನ್ಯಾಯನೀತಿಯಿಂದ ತುಂಬಿ ತುಳುಕುವುದು.

ಆಹಾ, ಕರ್ತನು ಒಬ್ಬ ಮಹಾಬಲಿಷ್ಠನನ್ನು ನೇಮಿಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, ನಾಶಕರವಾದ ಬಿರುಗಾಳಿಯಂತೆಯೂ, ಮುಳುಗಿಸುವ ಅತಿಧಾರಾವೃಷ್ಟಿಯಂತೆಯೂ ಬಲಾತ್ಕಾರದಿಂದ ಆ ಪಟ್ಟಣವನ್ನು ತನ್ನ ಕೈಯಿಂದ ಅಧೋಗತಿಗೆ ತರುವನು.

ಆತನ ಶ್ವಾಸವು ತುಂಬಿ ತುಳುಕಿ ಕಂಠದವರೆಗೂ ಏರುವ ತೊರೆಯಂತಿದೆ. ಜನಾಂಗಗಳನ್ನೂ ಸ್ವಲ್ಪವೂ ಉಳಿಸದೆ ಜರಡಿಯಿಂದ ಜಾಲಿಸುವುದಕ್ಕೆ ಬರುತ್ತಾನೆ. ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆಗಳಲ್ಲಿರುವುದು.

ನನ್ನ ಜನರು ಸಮಾಧಾನದ ನಿವಾಸದಲ್ಲಿಯೂ, ನಿರ್ಭಯವಾದ ನಿಲಯಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.

ಆದಕಾರಣ ನನ್ನ ನಾಮಕ್ಕೆ ನೆಲೆಯಾದ ನಿಮ್ಮ ಭರವಸೆಗೆ ಆಧಾರವಾದ ಆಲಯಕ್ಕೂ, ನಾನು ನಿಮಗೂ ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ಸ್ಥಳಕ್ಕೂ ಶೀಲೋವಿಗೆ ತಂದ ಗತಿಯನ್ನೇ ಈಗ ತರುವೆನು.

ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.

¶ “ಅಶಾಂತಿಯಿದ್ದರೂ ಅವರು ‘ಶಾಂತಿಯಿದೆ’ ಎಂದು ಹೇಳಿ ನನ್ನ ಜನರನ್ನು ವಂಚಿಸಿದ್ದಾರೆ. ಒಬ್ಬನು ತೆಳುವಾದ ಗೋಡೆಯನ್ನು ಕಟ್ಟಿದ್ದರೂ, ಇಗೋ, ಅದಕ್ಕೆ ಸುಣ್ಣಬಳಿಯುತ್ತಾರೆ;

ನಾನು ಗೋಗನ ಸಂಗಡ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ, ಸಾವಿಗೂ ಗುರಿಮಾಡಿ, ನಾನು ಅವನ ಮೇಲೆಯೂ, ಅವನ ದಂಡುಗಳ ಮೇಲೆಯೂ, ಅವನೊಂದಿಗಿರುವ ಅನೇಕ ಜನಾಂಗಗಳ ಮೇಲೆಯೂ ವಿಪರೀತ ಮಳೆ, ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.

¶ ಕರ್ತನು ಮತ್ತೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಯೆಹೋವನು ನೂಲುಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಗುಂಡಿತ್ತು.

ಅಂಥವುಗಳನ್ನು ಅನುಸರಿಸುವವರ ವಿಷಯದಲ್ಲಿ ದೇವರು ಕೊಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವುದೆಂದು ನಾವು ಬಲ್ಲೆವು.

¶ ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು ರಕ್ತ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು.

ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಸುಮಾರು ನಲ್ವತ್ತು ಕಿಲೊಗ್ರಾಮಿನಷ್ಟು ತೂಕವಾಗಿತ್ತು. ಆ ಆಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.