¶ ಆಗ ಯೆಹೋವನು ಮೋಶೆಗೆ ಹೇಳಿದ್ದೇನೇಂದರೆ, “ಇಸ್ರಾಯೇಲರಲ್ಲಿ ಹಿರಿಯರೆಂದೂ ಮತ್ತು ಅಧಿಪತಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಕರೆದು ಅಲ್ಲಿ ನಿನ್ನೊಡನೆ ನಿಲ್ಲಿಸಿಕೋ.
TSK
TSK · ಯೆಶಾಯ 28:6
Treasury of Scripture Knowledge references in ಕನ್ನಡ IRV.
ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮಗೋಸ್ಕರ ಯುದ್ಧಮಾಡಿ ನಿಮಗೆ ಜಯವನ್ನು ಉಂಟುಮಾಡುವನು” ಎಂದು ಹೇಳಬೇಕು.
ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.
ನನಗೆ ಶೌರ್ಯವೆಂಬ ನಡುಕಟ್ಟನ್ನು ಬಿಗಿಯುವವನೂ, ನನ್ನ ಮಾರ್ಗವನ್ನು ಸರಾಗ ಮಾಡುವವನೂ ದೇವರೇ.
ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.
ರಾಜನು ನ್ಯಾಯಾಸನಾರೂಢನಾಗಿ, ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.
¶ ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು, ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು.
ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.
ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು