TSK

TSK · ಯೆಶಾಯ 28:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.

ಯಾಕೆಂದರೆ ಅವರು ಯೆಹೋವನ ಭಯಭಕ್ತಿಗೆ ಮನಸ್ಸು ಕೊಡದೆ ತಿಳಿವಳಿಕೆಯನ್ನು ಹಗೆಮಾಡಿದರು.

ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.

ನಿನ್ನ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವೆನು.

ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?

ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?

¶ ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, ‹“ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.›

‹ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ”› ಎಂದು ಹೇಳಿದನು.

ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ.

ಹೊಸದಾಗಿ ಹುಟ್ಟಿದ ಶಿಶುಗಳಂತೆ ನೀವು ದೇವರ ವಾಕ್ಯವೆಂಬ ಶುದ್ಧವಾದ ಆತ್ಮೀಕ ಹಾಲನ್ನು ಬಯಸಿರಿ. ಆದರಿಂದ ರಕ್ಷಣೆಯಲ್ಲಿ ಬೆಳೆಯುವಿರಿ.