ಕಣ್ಣೀರಿನ ತಗ್ಗನ್ನು ದಾಟುವಾಗ, ಅಲ್ಲಿ ಒರತೆಗಳನ್ನು ತೋಡಿ ನೀರಿನ ಸ್ಥಳವಾಗ ಮಾಡುತ್ತಾರೆ. ಮುಂಗಾರು ಮಳೆಯು ಅದನ್ನು ಸಮೃದ್ಧಿಗೊಳಿಸುತ್ತದೆ.
TSK
TSK · ಯೆಶಾಯ 29:17
Treasury of Scripture Knowledge references in ಕನ್ನಡ IRV.
ಅರಣ್ಯವನ್ನು ಕೆರೆಯಾಗಿಯೂ, ಒಣನೆಲವನ್ನು ಬುಗ್ಗೆಗಳಾಗಿಯೂ ಮಾಡಿ,
¶ ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು, ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು.
ಮರುಭೂಮಿಯಲ್ಲಿ ದೇವದಾರು, ಜಾಲಿಮರ, ಸುಗಂಧ ಒಲೀವ್ ಮರಗಳನ್ನು ನಾನು ನೆಡುವೆನು. ಮರುಭೂಮಿಯಲ್ಲಿ ತುರಾಯಿ, ತಪಸಿ, ತಿಲಕ ವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.
ಮುಳ್ಳಿಗೆ ಬದಲಾಗಿ ತುರಾಯಿಯೂ, ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; ಆ ವನವು ಯೆಹೋವನ ನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.”
ನೀವೆಲ್ಲರೂ ಕತ್ತಿಗೆ ಬೀಳುವಿರಿ, ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ, ಏಕೆಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಿದರೂ ನೀವು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ, ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡಿರಿ.”
ಆಗ ಯೆಹೋವನು, “ಈ ಮಗುವಿಗೆ ‘ಲೋ ಅಮ್ಮಿ’ ಎಂಬ ಹೆಸರಿಡು; ಏಕೆಂದರೆ ನೀವು ನನ್ನ ಪ್ರಜೆಯಲ್ಲ, ನಾನು ಇನ್ನು ನಿಮ್ಮ ದೇವರಲ್ಲ” ಎಂದನು.
ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಉಳಲ್ಪಡುವುದು, ಯೆರೂಸಲೇಮು ಹಾಳುದಿಬ್ಬಗಳಾಗುವುದು. ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವುದು.
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಸ್ವಲ್ಪ ಕಾಲದ ಮೇಲೆ, ನಾನು ಇನ್ನೊಂದೇ ಸಾರಿ ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ, ಒಣನೆಲವನ್ನೂ ಅದುರಿಸಿ ಸಕಲಜನಾಂಗಗಳನ್ನು ನಡುಗಿಸುವೆನು;
‹ಆದರೆ ಈಗ ಮೊದಲಿನವರಾದ ಬಹು ಮಂದಿ ಕಡೆಯವರಾಗುವರು ಮತ್ತು ಕಡೆಯವರಾದ ಬಹು ಮಂದಿ ಮೊದಲಿನವರಾಗುವರು.›
‹ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು.›
ಈ ಮಾತಿಗೆ, “ನನ್ನನ್ನು ಕಸಿಮಾಡುವುದಕ್ಕಾಗಿ ಕೊಂಬೆಗಳು ಮುರಿದುಹಾಕಲ್ಪಟ್ಟವಲ್ಲಾ” ಎಂದು ನೀನು ಒಂದು ವೇಳೆ ಹೇಳಬಹುದು.