ಹೀಗಿರಲು ಯೆಹೋವನು ತನ್ನ ಜನರ ಮೇಲೆ ಕೋಪಗೊಂಡು, ಅವರ ಮೇಲೆ ಕೈಯೆತ್ತಿ, ಅವರನ್ನು ಹೊಡೆದುಬಿಡುವನು. ಆಗ ಬೆಟ್ಟಗಳು ನಡಗುವವು. ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೇ ಕೈಯೆತ್ತಿಯೇ ಇರುವುದು.
TSK
TSK · ಯೆಶಾಯ 29:2
Treasury of Scripture Knowledge references in ಕನ್ನಡ IRV.
ಇದೇ ದಿನ ಶತ್ರುಗಳು ನೋಬಿನಲ್ಲಿ ಬೀಡುಬಿಡುವರು. ಚೀಯೋನ್ ನಗರಿಯ ಪರ್ವತದ ಕಡೆಗೆ ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.
¶ ಇಗೋ, ಯೆಹೋವನು ಭೂಮಿಯನ್ನು ಬರಿದುಮಾಡಿ, ಎಲ್ಲಾ ಪ್ರದೇಶವನ್ನು ನಿರ್ಜನಮಾಡಿ, ಅದನ್ನು ವಿಕಾರಪಡಿಸಿ, ಅದರ ನಿವಾಸಿಗಳನ್ನು ಚದುರಿಸಿಬಿಡುವವನಾಗಿದ್ದಾನೆ.
ಯೆಹೋವನ ಖಡ್ಗವು ರಕ್ತದಿಂದ ತುಂಬಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಲೇಪಿತವಾಗಿದೆ. ಏಕೆಂದರೆ ಯೆಹೋವನು ಬೊಚ್ರದಲ್ಲಿ ಬಲಿಯನ್ನೂ, ಎದೋಮ್ ಸೀಮೆಯಲ್ಲಿ ದೊಡ್ಡ ಹತ್ಯೆಯನ್ನೂ ಮಾಡಬೇಕೆಂದಿದ್ದಾನೆ.
ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೀಗೆ ಹೇಳುತ್ತಾನೆ, ‘ಈ ದಿನದಲ್ಲಿ ನಮಗೆ ಮಹಾಕಷ್ಟವೂ, ಶಿಕ್ಷೆಯೂ, ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವುದಕ್ಕೆ ಬಲ ಸಾಲದು.
ಯೆಹೂದದ ಅರಸನಾದ ಚಿದ್ಕೀಯನೂ ಮತ್ತು ಸಮಸ್ತ ಸೈನಿಕರೂ ಇವರನ್ನು ನೋಡಿ ಅದೇ ರಾತ್ರಿಯಲ್ಲಿ ಹೊರಟು ಅರಸನ ಉದ್ಯಾನದ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ಪಟ್ಟಣವನ್ನು ಬಿಟ್ಟು ಅರಾಬಾ ಎಂಬ ತಗ್ಗಾದ ಪ್ರದೇಶದ ಕಡೆಗೆ ಪಲಾಯನ ಮಾಡಿದರು.
ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸ ಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ.’ ಇದು ಕರ್ತನಾದ ಯೆಹೋವನ ನುಡಿ.”
¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನರಪುತ್ರನೇ, ಎಲ್ಲಾ ಬಗೆಯ ಪಕ್ಷಿಗಳಿಗೂ, ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ, ‘ನೀವು ಕೂಡಿಬನ್ನಿರಿ; ನಾನು ಇಸ್ರಾಯೇಲಿನ ಪರ್ವತಗಳ ಮೇಲೆ ನಿಮಗಾಗಿ ಅರ್ಪಿಸುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದು ಬಂದು, ಮಾಂಸವನ್ನು ತಿಂದು, ರಕ್ತವನ್ನು ಕುಡಿಯಿರಿ.
¶ ಆ ಮೇಲೆ ಒಬ್ಬ ದೇವದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾ ಸ್ವರದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ, “ಬನ್ನಿರಿ, ದೇವರು ಮಾಡಿಸುವ ಮಹಾ ಔತಣಕ್ಕೆ ಸೇರಿ ಬನ್ನಿರಿ,