TSK

TSK · ಯೆಶಾಯ 29:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವುದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು. ಪರಿಶುದ್ಧನಾದ ದೇವರು ಧರ್ಮವನ್ನು ನಡೆಸುವುದರಲ್ಲಿ ಪರಿಶುದ್ಧನು ಎಂದು ಅನಿಸಿಕೊಳ್ಳುವನು.

“ನನ್ನ ಪ್ರಜೆಯಾದ ಐಗುಪ್ತಕ್ಕೂ, ನನ್ನ ಕೈಯಿಂದ ಸೃಷ್ಟಿಸಲ್ಪಟ್ಟ ಅಶ್ಶೂರಕ್ಕೂ, ನನ್ನ ಸ್ವತ್ತಾದ ಇಸ್ರಾಯೇಲಿಗೂ ಶುಭವಾಗಲಿ” ಎಂದು ಸೇನಾಧೀಶ್ವರನಾದ ಯೆಹೋವನು ಅವುಗಳನ್ನು ಆಶೀರ್ವದಿಸುವನು.

ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ಸೃಷ್ಟಿಸಿಕೊಂಡಿದ್ದೇನೆ.

ಸಂತಾನವನ್ನು ಕಳೆದುಕೊಂಡವಳಾದ ನಿನ್ನ ಮಕ್ಕಳು, ‘ಸ್ಥಳವು ನನಗೆ ಸಂಕೋಚ, ನಾನು ವಾಸಿಸುವುದಕ್ಕೆ ಸ್ಥಳವಾಗುವಂತೆ ಸರಿದುಕೋ’ ಎಂದು ಆಡಿಕೊಳ್ಳುವ ಮಾತು ಇನ್ನು ಮೇಲೆ ನಿನ್ನ ಕಿವಿಗೆ ಬೀಳುವುದು.

ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.

ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.

ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”