TSK

TSK · ಯೆಶಾಯ 29:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ.

ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ, ಇದರಲ್ಲೇ ನಡೆಯಿರಿ” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.

ಆಗ ಯೆಹೋವನ ಹಸ್ತವು ಇದನ್ನು ಮಾಡಿದೆ, ಹೌದು, ಇಸ್ರಾಯೇಲಿನ ಸದಮಲಸ್ವಾಮಿಯೇ ಸೃಷ್ಟಿಸಿದ್ದಾನೆ” ಎಂದು ಎಲ್ಲರೂ ಕಂಡು ತಿಳಿದು ಮನಸ್ಸಿಗೆ ತಂದು ಗ್ರಹಿಸಿಕೊಳ್ಳುವರು.

ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.

‹ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು’ ಎಂದು ಹೇಳಲು›

‹ಆಗ ಅವನಿಗೆ ಬುದ್ಧಿಬಂದು ಅವನು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ.›

¶ ದೇವರ ವಾಕ್ಯವು ಪ್ರಬಲವಾಯಿತು; ಶಿಷ್ಯರ ಸಂಖ್ಯೆಯು ಯೆರೂಸಲೇಮಿನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂದಿತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತ ನಂಬಿಕೆಗೆ ಒಳಗಾಗುತ್ತಾ ಬಂದರು.

ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.

ತಾನೂ ಸಹ ಬಲಹೀನನಾಗಿರುವುದರಿಂದ ಅವನು ಅಜ್ಞಾನಿಗಳಿಗೂ ಮತ್ತು ಮಾರ್ಗತಪ್ಪಿದವರಿಗೂ ದಯಾಪರನಾಗಿ ನಡೆದುಕೊಳ್ಳುವುದಕ್ಕೆ ಶಕ್ತನಾಗಿರುವನು.