ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು.
TSK
TSK · ಯೆಶಾಯ 29:9
Treasury of Scripture Knowledge references in ಕನ್ನಡ IRV.
ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.
ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.
ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು” ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು.
ನೀನು ಹಿಂಸೆಗೊಳಗಾಗಿದ್ದಿ. ಕುಡಿದು ಅಮಲೇರಿದ್ದಿ. ಆದರೆ ದ್ರಾಕ್ಷಾರಸದಿಂದಲ್ಲ. ಆದುದರಿಂದ ಈಗ ಇದನ್ನು ಕೇಳು.
ಆಕಾಶಮಂಡಲವೇ, ಇದಕ್ಕೆ ಬೆಚ್ಚಿಬೆರಗಾಗು, ತತ್ತರಿಸು, ಹಾಳಾಗು” ಎಂದು ಯೆಹೋವನು ನುಡಿಯುತ್ತಾನೆ.
ಪ್ರವಾದಿಗಳ ವಿಷಯ: ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ. ನಾನು ಯೆಹೋವನಿಗೂ ಆತನ ಪರಿಶುದ್ಧ ವಾಕ್ಯಗಳಿಗೂ ವಶನಾಗಿ ಅಮಲೇರಿದವನಂತಿದ್ದೇನೆ. ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ.
ಬಾಬೆಲು ಯೆಹೋವನ ಕೈಯಲ್ಲಿನ ಹೊನ್ನಿನ ಪಾತ್ರೆಯ ಹಾಗಿತ್ತು; ಲೋಕದವರೆಲ್ಲರೂ ಅದರಲ್ಲಿ ಕುಡಿದು ಮತ್ತರಾದರು; ಜನಾಂಗಗಳು ಅದರಲ್ಲಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.
ಜನಾಂಗಗಳ ಮಧ್ಯೆ ನಡೆಯುವುದನ್ನು ದೃಷ್ಟಿಸಿ ನೋಡಿ. ಅದರಿಂದ ನೀವು ಬೆರಗಾಗಿ ಹೋಗುವಿರಿ; ನಿಮ್ಮ ಕಾಲದಲ್ಲೇ ನಾನು ಒಂದು ಕಾರ್ಯವನ್ನು ಮಾಡುವೆನು. ನಾನು ಆ ಕಾರ್ಯದ ಬಗ್ಗೆ ನಿಮಗೆ ಎಷ್ಟು ತಿಳಿಹೇಳಿದರೂ ನೀವು ನಂಬುವುದಿಲ್ಲ.
ಆತನು ಮೂರನೆಯ ಸಾರಿ ಅವರ ಬಳಿಗೆ ಬಂದು, ‹“ನೀವು ಇನ್ನು ನಿದ್ರಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವಿರಾ? ಸಾಕು, ಆ ಗಳಿಗೆ ಸಮೀಪಿಸಿದೆ; ಮನುಷ್ಯಕುಮಾರನು ಪಾಪಿಗಳ ಕೈಗೆ ಒಪ್ಪಿಸಲ್ಪಡುತ್ತಾನೆ.›
ಆ ಸ್ತ್ರೀಯು ನೀತಿವಂತರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.