ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೇ ಹೋಯಿತು.
TSK
TSK · ಯೆಶಾಯ 3:1
Treasury of Scripture Knowledge references in ಕನ್ನಡ IRV.
ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, “ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.
ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವುದು ಖಂಡಿತ. ಘನವಂತರು ಹಸಿಯುವರು ಮತ್ತು ಜನಸಮೂಹವು ಬಾಯಾರಿಕೆಯಿಂದ ಒಣಗುವುದು.
ನಿನ್ನ ಕರ್ತನೂ, ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ, ನನ್ನ ರೋಷದಿಂದ ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು. ಅದನ್ನು ನೀನು ತಿರುಗಿ ಕುಡಿಯುವುದೇ ಇಲ್ಲ.
“ಎನ್ನೊಡೆಯನೇ, ಅರಸನೇ, ಇವರು ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ದುಷ್ಟಕಾರ್ಯವೇ ಸರಿ, ಅವನನ್ನು ಬಾವಿಯಲ್ಲಿ ಹಾಕಿದ್ದಾರೆ; ಅವನು ಆಹಾರವಿಲ್ಲದೆ ಬಿದ್ದಲ್ಲೇ ಸಾಯುವುದು ಖಂಡಿತ, ಪಟ್ಟಣದಲ್ಲಿ ಇನ್ನು ರೊಟ್ಟಿಯಿಲ್ಲವಲ್ಲಾ” ಎಂದು ಅರಿಕೆಮಾಡಿದನು.
“ನರಪುತ್ರನೇ, ಅಪರಾಧವನ್ನು ನಡೆಸಿ ನನ್ನ ವಿರುದ್ಧವಾಗಿ ಪಾಪಮಾಡಿದ ದೇಶದ ಮೇಲೆ ನಾನು ಕೈಯೆತ್ತಿ, ಅದರ ಆಹಾರ ಸರಬರಾಜನ್ನು ತೆಗೆದುಬಿಟ್ಟು, ಕ್ಷಾಮವನ್ನು ಬರಮಾಡಿ, ಜನರನ್ನು, ಪಶುಗಳನ್ನು ಅದರೊಳಗಿಂದ ನಿರ್ಮೂಲ ಮಾಡುತ್ತೇನೆ.