¶ “ಆದರೆ ನೀವು ಹಾಗೆ ಮಾಡದೆ ಹೋದರೆ, ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ತಿಳಿದುಕೊಳ್ಳಿರಿ.
TSK
TSK · ಯೆಶಾಯ 3:11
Treasury of Scripture Knowledge references in ಕನ್ನಡ IRV.
ಶೆಕೆಮಿನವರಿಗಾದರೋ ಅವರ ದುಷ್ಟತನವನ್ನು ಅವರ ತಲೆಯ ಮೇಲೆಯೇ ಬರಮಾಡಿದನು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನು ಇವರ ವಿಷಯದಲ್ಲಿ ನುಡಿದ ಶಾಪವು ನೆರವೇರಿತು.
ಯೆಹೋವನು ನಿನ್ನನ್ನು ಕುರಿತು, ‘ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನನ್ನು ಕಸವನ್ನೋ ಎಂಬಂತೆ ತೆಗೆದುಹಾಕುವೆನು. ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಕಡಿದುಬಿಡುವೆನು.
ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.
ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.
ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು?
ಶಿಷ್ಟನು ಭೂಮಿಯಲ್ಲಿ ತನ್ನ ಕ್ರಿಯಾಫಲವನ್ನು ಅನುಭವಿಸುವಲ್ಲಿ, ದುಷ್ಟನೂ, ಪಾಪಿಯೂ ದಂಡನೆಯನ್ನು ಅನುಭವಿಸುವರು ಎಂದು ಹೇಳಬೇಕಾಗಿಲ್ಲ.
ಆದರೆ ದುಷ್ಟನಿಗೆ ಒಳ್ಳೆಯದಾಗುವುದಿಲ್ಲ. ನೆರಳಿನಂತಿರುವ ಅವನ ದಿನಗಳು ಹೆಚ್ಚುವುದಿಲ್ಲ. ಏಕೆಂದರೆ ಅವನು ದೇವರಿಗೆ ಭಯಪಡುವುದಿಲ್ಲ.
“ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ಯೆಹೋವನು ನುಡಿಯುತ್ತಾನೆ.
ಹೀಗಿರಲು ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ.
¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿರುವೆ ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.
ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.