TSK

TSK · ಯೆಶಾಯ 3:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ರೆಮಲ್ಯನ ಮಗನು ಇಸ್ರಾಯೇಲ್ಯರ ಅರಸನು ಆದ ಪೆಕಹ ಎಂಬವನು ಒಂದೇ ದಿನ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರೂ ಯುದ್ಧವೀರರು. ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತೊರೆದು ಬಿಟ್ಟಿದ್ದೇ ಇದಕ್ಕೆ ಕಾರಣವಾಗಿತ್ತು.

ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ” ಈ ಮಾತನ್ನು ಯೆಹೋವನೇ ನುಡಿದಿದ್ದಾನೆ.

ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು” ಎಂದನು.

ನಾನು ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಯೆರೂಸಲೇಮಿನವರ ಆಲೋಚನೆಯನ್ನು ಮಣ್ಣುಪಾಲುಮಾಡಿ, ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ, ಆ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು.

ಯುವಕರು ಮತ್ತು ವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣಿಯರು ಹಾಗು ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಸಂಹರಿಸಿದಿ.