TSK

TSK · ಯೆಶಾಯ 3:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅರಸನಾದ ದಾವೀದನು ಬಹುರೀಮಿಗೆ ಬಂದಾಗ ಸೌಲನ ವಂಶದವನೂ, ಗೇರನ ಮಗನೂ ಆದ ಶಿಮ್ಮೀಯು ದಾವೀದನನ್ನು ಶಪಿಸುತ್ತಾ, ಆ ಊರಿನಿಂದ ಹೊರಗೆ ಬಂದನು.

¶ ಈಗಲಾದರೋ ನನಗಿಂತ ಚಿಕ್ಕವಯಸ್ಸಿನವರು ನನ್ನನ್ನು ಪರಿಹಾಸ್ಯಮಾಡುತ್ತಾರೆ; ಇವರ ಹೆತ್ತವರನ್ನು ನನ್ನ ಕುರಿ ಮಂದೆಯ ನಾಯಿಗಳ ಸಂಗಡ ಸೇರಿಸುವುದಕ್ಕೂ ಉದಾಸಿನ ಮಾಡಿದೆನು.

ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.

ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟು ಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.

“ಐಗುಪ್ತರನ್ನು ಐಗುಪ್ತ್ಯರ ಮೇಲೆಯೇ ಎಬ್ಬಿಸುವೆನು: ಸಹೋದರನಿಗೆ ವಿರುದ್ಧವಾಗಿ ಸಹೋದರನು, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ, ಪಟ್ಟಣಕ್ಕೆ ವಿರುದ್ಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಹೋರಾಡುವವು.

ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.

ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ.

¶ ನಾನು ಹೀಗೆ ಸಾರಿದೆನು; “ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧಿಪತಿಗಳೇ ಕಿವಿಗೊಟ್ಟು ಕೇಳಿರಿ. ನ್ಯಾಯ ನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೇ? ನಿಮ್ಮ ಧರ್ಮವಲ್ಲವೇ?

ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ. ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರೂ ರಕ್ತಸುರಿಸಬೇಕೆಂದು ಹೊಂಚುಹಾಕುತ್ತಾರೆ. ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.

ಮಗನು ತಂದೆಯನ್ನು ತುಚ್ಛೀಕರಿಸುತ್ತಾನೆ. ಮಗಳು ತಾಯಿಗೆ ಎದುರೇಳುತ್ತಾಳೆ. ಸೊಸೆಯು ಅತ್ತೆಯನ್ನು ವಿರೋಧಿಸುತ್ತಾಳೆ. ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.

ಯೆಹೋವನು ಇಂತೆನ್ನುತ್ತಾನೆ, “ನಾನು ಲೋಕನಿವಾಸಿಗಳನ್ನು ಇನ್ನು ಕರುಣಿಸೆನು; ಇಗೋ, ಪ್ರತಿಯೊಬ್ಬನನ್ನು ಅವನವನ ನೆರೆಯವನ ಕೈಗೂ, ಅರಸನ ಕೈಗೂ ಒಪ್ಪಿಸುವೆನು; ಆ ಬಲಿಷ್ಠರು ಲೋಕವನ್ನು ಪುಡಿಪುಡಿಮಾಡುವರು; ಅವರ ಕೈಗೆ ಸಿಕ್ಕಿದವರನ್ನು ಉದ್ಧರಿಸೆನು.”

ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು,

ಅನಂತರ ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ, ಈಗ “ಪ್ರವಾದಿಸು” ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು.

ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?