TSK

TSK · ಯೆಶಾಯ 30:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ಈ ದುಷ್ಟ ಸಂತತಿಯವರಾದ ನೀವು ನಿಮ್ಮ ತಂದೆಗಳಿಗೆ ಬದಲಾಗಿ ಬಂದು ಇಸ್ರಾಯೇಲರ ಮೇಲಿದ್ದ ಯೆಹೋವನ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತೀರಿ.

ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಯೆಹೋವನಿಗೆ ದ್ರೋಹಿಗಳಾಗಿ ನಡೆದುಕೊಂಡಿದ್ದೀರಿ.

ಆಗ ಇಸ್ರಾಯೇಲ್ಯರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಯೆಹೋವನನ್ನು ವಿಚಾರಿಸಲಿಲ್ಲ.

ಹೀಗಿದ್ದಾಗ ನೀನು ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತಿ ಸಣ್ಣವನನ್ನಾದರೂ ಸೋಲಿಸುವುದು ಸಾಧ್ಯವೇ? ರಥಾಶ್ವಬಲಗಳ ವಿಷಯವಾಗಿ ನೀನು ಐಗುಪ್ತರ ಮೇಲೆ ಭರವಸೆಯಿಟ್ಟಿರುವೆ.

ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ; ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು. ಸೆಲಾ

ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.

ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.

ಅಯ್ಯೋ, ವ್ಯರ್ಥವಾದ ಹಗ್ಗಗಳಿಂದ ಅಪರಾಧ ದಂಡನೆಯನ್ನು, ರಥವನ್ನು ಹಗ್ಗಗಳಿಂದಲೋ ಎಂಬಂತೆ ಪಾಪವನ್ನು ಎಳೆದುಕೊಳ್ಳುತ್ತಾ,

¶ “ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ” ಎಂದು ಒಂದು ವೇಳೆ ನಿಮಗೆ ಹೇಳಾರು, “ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ?

ಒಬ್ಬನು ಕಾಲುಚಾಚಿಕೊಂಡು ಮಲಗುವನೆಂದರೆ ಹಾಸಿಗೆಯ ಉದ್ದವೂ ಸಾಲುವುದಿಲ್ಲ; ಮುದುರಿಕೊಂಡು ಮಲಗುವನೆಂದರೆ ಹೊದಿಕೆಯ ಅಗಲವೂ ಸಾಲುವುದಿಲ್ಲ.”

ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರು.

ಆಗ ಪ್ರತಿ ಮನುಷ್ಯನು ಗಾಳಿಯಲ್ಲಿ ಅಡಗಿಕೊಳ್ಳುವಂತೆಯೂ, ಅತಿವೃಷ್ಟಿಯಲ್ಲಿ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿನ ನೀರಿನ ಕಾಲುವೆಗಳ ಹಾಗೂ, ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.

ನನ್ನನ್ನು ತೊರೆದು, ಮನಸ್ಸು ಬಂದ ಹಾಗೆ ದುರ್ಮಾರ್ಗದಲ್ಲಿ ನಡೆಯುವ ಜನರನ್ನು ನಾನು ದಿನವೆಲ್ಲಾ ಕೈಚಾಚಿ ಕರೆದೆನು.

ಆ ನಗರವು ನನಗೆ ತಿರುಗಿಬಿದ್ದ ಕಾರಣ ಅದನ್ನು ಹೊಲಕಾಯುವವರಂತೆ ಸುತ್ತಿಕೊಂಡಿದ್ದಾರೆ ಎಂದು ಯೆಹೋವನು ನುಡಿಯುತ್ತಾನೆ.

ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನನ್ನ ವಿರುದ್ಧವಾಗಿ ತಿರುಗಿಬಿದ್ದು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ; ಈ ದಿನದವರೆಗೆ ಅವರೂ, ಅವರ ಪೂರ್ವಿಕರೂ ನನ್ನ ವಿರುದ್ಧವಾಗಿ ಪಾಪಮಾಡುತ್ತಲೇ ಇದ್ದಾರೆ.

ಇದಲ್ಲದೆ ನಿನ್ನ ನಾಲಿಗೆಯು ಸೇದಿ ಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ನೀನು ಅವರನ್ನು ಖಂಡಿಸಲಾರೆ; ಅವರು ತಿರುಗಿ ಬೀಳುವ ಮನೆತನದವರಾಗಿದ್ದಾರೆ.

ಅವರು ಉಣ್ಣುತ್ತಿದ್ದರೂ ತೃಪ್ತಿ ದೊರೆಯದು, ಹಾದರ ಮಾಡುತ್ತಿದ್ದರೂ ಪ್ರಜಾಭಿವೃದ್ಧಿಯಾಗದು; ಯೆಹೋವನ ಕಡೆಗೆ ಗಮನಿಸುವುದನ್ನು ಬಿಟ್ಟುಬಿಟ್ಟಿದ್ದಾರಷ್ಟೆ.

ಅದರ ದುರಾಲೋಚನೆಗಳ ನಿಮಿತ್ತ ಖಡ್ಗವು ಅದರ ಪಟ್ಟಣಗಳ ಮೇಲೆ ಬೀಸಲ್ಪಟ್ಟು, ಅಲ್ಲಿನ ಕೋಟೆಗಳನ್ನು ಧ್ವಂಸಮಾಡಿ ನುಂಗಿಬಿಡುವುದು.

¶ “ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.

ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.