¶ ಆದುದರಿಂದ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತರು ಮಾಡಿದಂತೆ, ನಿಮ್ಮನ್ನು ಕೋಲಿನಿಂದ ಹೊಡೆದು, ನಿಮ್ಮ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
TSK
TSK · ಯೆಶಾಯ 30:19
Treasury of Scripture Knowledge references in ಕನ್ನಡ IRV.
ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.
“ನನ್ನ ಸಂತೈಸಿರಿ, ಸಂತೈಸಿರಿ” ಎಂದು ನಿಮ್ಮ ದೇವರು ಹೇಳುತ್ತಾನೆ.
ನೀನು ತ್ಯಜಿಸಿದ ಮನನೊಂದ ಹೆಂಡತಿ, ಹೌದು, ತ್ಯಜಿಸಲ್ಪಟ್ಟವಳಾದ ನನ್ನ ಯೌವನಕಾಲದ ಪತ್ನಿ ಎಂದು ಯೆಹೋವನು ನಿನ್ನನ್ನು ಕನಿಕರಿಸಿ ಕರೆದಿದ್ದಾನೆ” ಎಂಬುದು ನಿನ್ನ ದೇವರ ನುಡಿ.
ನಿನ್ನ ಸೂರ್ಯನು ಇನ್ನು ಮುಳುಗನು, ನಿನ್ನ ಚಂದ್ರನು ತೊಲಗನು; ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಯಾಗುವುದು.
ಯಾಕೋಬಿನಿಂದ ಸಂತಾನವನ್ನು ಹುಟ್ಟಿಸುವೆನು, ಯೆಹೂದ ವಂಶದಿಂದ ನನ್ನ ಪರ್ವತಗಳ ಸ್ವತ್ತಿನ ಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವತ್ತನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು.
ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರಲ್ಲಿ ಹರ್ಷಗೊಳ್ಳುವೆನು. ರೋದನ ಶಬ್ದವೂ, ಪ್ರಲಾಪಧ್ವನಿಯೂ ಅಲ್ಲಿ ಇನ್ನು ಕೇಳಿಸವು.
ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.
ಯೆಹೋವನು ಇಂತೆನ್ನುತ್ತಾನೆ, “ನಿನ್ನ ಗಾಯವು ಗುಣಹೊಂದುವುದಿಲ್ಲ, ನಿನ್ನ ಬಾಸುಂಡೆಯು ಘೋರವಾಗಿದೆ.
ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು. ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು. ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.
‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.
ಓಹೋ, ಬಾಬೆಲಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಯೆಹೋವನು ತನ್ನ ಆಲಯವನ್ನು ನಾಶ ಮಾಡಿದವರಿಗೆ ಮುಯ್ಯಿತೀರಿಸಿದ್ದಾನೆ ಎಂಬ ಸಮಾಚಾರವನ್ನು ಚೀಯೋನಿನಲ್ಲಿ ಪ್ರಕಟಿಸುವುದಕ್ಕೆ ಹೋಗುತ್ತಾರಲ್ಲಾ.
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ, ಉತ್ತಮ ನೈವೇದ್ಯಗಳನ್ನೂ, ಮೀಸಲಾದ ಎಲ್ಲವನ್ನೂ ಬರಮಾಡಿಕೊಳ್ಳುವೆನು.
ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪೂರ್ವಿಕರು ವಾಸಿಸಿದ ದೇಶದಲ್ಲಿ ಅವರೂ ಮತ್ತು ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು. ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಅರಸನಾಗಿರುವನು.
¶ ಚೀಯೋನ್ ಕುವರಿಯೇ, ಹರ್ಷಧ್ವನಿಗೈ! ಇಸ್ರಾಯೇಲೇ, ಜಯಘೋಷಮಾಡು! ಯೆರೂಸಲೇಮ್ ಕುವರಿಯೇ, ಹೃದಯಪೂರ್ವಕವಾಗಿ ಆನಂದಿಸು, ಉಲ್ಲಾಸಿಸು!
“ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು.
¶ ‹“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;›
ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ ಬಿಡಿಸುವವನು “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.
ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು.
ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.