ನೀವು ಐಗುಪ್ತದೇಶವನ್ನು ತಿರುಗಿ ಎಂದಿಗೂ ನೋಡುವುದಿಲ್ಲವೆಂದು ಯೆಹೋವನು ಹೇಳಿದ್ದರೂ ಆತನು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರುಗಿ ಹೋಗ ಮಾಡುವನು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನು ದಾಸದಾಸಿಯರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವುದಿಲ್ಲ.
TSK
TSK · ಯೆಶಾಯ 30:2
Treasury of Scripture Knowledge references in ಕನ್ನಡ IRV.
ಅದು, ‘ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡುವುದು’ ಎಂದಿತು.
ಕೆಲವು ವರ್ಷಗಳಾದ ನಂತರ ಅರಸನಾದ ಹೋಶೇಯನು ಪ್ರತಿವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದುದರಿಂದಲೂ, ಐಗುಪ್ತದ ಅರಸನಾದ ಸೋ ಎಂಬುವವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದರಿಂದಲೂ ಅಶ್ಶೂರದ ಅರಸನು ಇವನನ್ನು ದ್ರೋಹಿಯೆಂದು ತಿಳಿದು ಬಂಧಿಸಿ ಸೆರೆಯಲ್ಲಿಟ್ಟನು.
ಆಲೋಚನೆ ಹೇಳಿರಿ, ತೀರ್ಮಾನಿಸಿರಿ; ನಡು ಮಧ್ಯಾಹ್ನದಲ್ಲಿ ನಿಮ್ಮ ನೆರಳು ರಾತ್ರಿಯ ಕತ್ತಲಿನಂತೆ ದಟ್ಟವಾದ ನೆರಳನ್ನು ಕೊಡಲಿ. ನಿಮ್ಮಲ್ಲಿರುವ ದೀನದಲಿತರನ್ನು ಸಂರಕ್ಷಿಸು, ತಪ್ಪಿಸಿಕೊಂಡು ಹೋಗುವ ಜನರ ವಿಷಯವನ್ನು ಬಯಲುಮಾಡಬೇಡಿ.
¶ ಆಗ ನನ್ನ ಜನರು ತಾವು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಂಡಿದ್ದ ಐಗುಪ್ತದ ವಿಷಯವಾಗಿಯೂ ಬೆಚ್ಚಿಬೆರಗಾಗಿ ನಾಚಿಕೆಪಡುವರು.
¶ “‘ಜಜ್ಜಿದ ದಂಟಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತೀಯಷ್ಟೆ. ಒಬ್ಬನು ಅಂಥ ಕೋಲನ್ನು ಆಧಾರ ಮಾಡಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಕ್ಕೆ ಹೋಗುತ್ತದೆ! ಐಗುಪ್ತದ ಅರಸನಾದ ಫರೋಹನನಲ್ಲಿ ಭರವಸವಿಟ್ಟವರಿಗೆ ಅದೇ ಗತಿಯಾಗುವುದು.
ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್ ನದಿಯ ನೀರನ್ನು ಕುಡಿಯ ಅವಶ್ಯಕತೆ ಇತ್ತೆ? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡುವ ಅವಶ್ಯಕತೆ ಇತ್ತೇ?
ಆಗ ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತ್ತು; ಇದನ್ನು ಕೇಳಿ ಯೆರೂಸಲೇಮನ್ನು ಮುತ್ತಿದ್ದ ಕಸ್ದೀಯರು ಬಿಟ್ಟು ಹೋಗಿದ್ದರು.
ಬೇಡವೇ ಬೇಡ; ನಾವು ಯುದ್ಧ ಕಾಣದೆ, ತುತ್ತೂರಿಯ ಶಬ್ದ ಕೇಳದೆ, ಅನ್ನದ ಕೊರತೆಯಿಂದ ಹಸಿವಾಗದೆ ಇರುವ ಐಗುಪ್ತ ದೇಶಕ್ಕೆ ಹೋಗಿ ಅಲ್ಲೇ ವಾಸಿಸುವೆವು’ ಎಂದುಕೊಂಡರೆ,
ಇವರೆಲ್ಲರನ್ನೂ ಕಾರೇಹನ ಮಗನಾದ ಯೋಹಾನಾನನೂ, ಸಕಲ ಸೇನಾಧಿಪತಿಗಳೂ ಕರೆದುಕೊಂಡು ಐಗುಪ್ತಕ್ಕೆ ಹೋಗಿ ತಹಪನೇಸ್ ಊರಿಗೆ ಸೇರಿದರು. ಯೆಹೋವನ ಮಾತನ್ನು ಕೇಳಲೇ ಇಲ್ಲ.
ಆಗ ಐಗುಪ್ತದ ಸಕಲ ನಿವಾಸಿಗಳು ನಾನೇ ಯೆಹೋವನು ಎಂದು ತಿಳಿಯವರು. ಅವರು ಇಸ್ರಾಯೇಲ್ ವಂಶದವರಿಗೆ ದಂಟಿನ ಊರುಗೋಲಾಗಿದ್ದರು.
ಅದು ಒಂಟಿಯಾದ ಕಾಡುಕತ್ತೆಯಂತೆ ಮನಸ್ಸು ಬಂದ ಹಾಗೆ ನಡೆದು ಅಶ್ಶೂರಕ್ಕೆ ಹೋಗಿದೆ. ಎಫ್ರಾಯೀಮು ಹಣಕೊಟ್ಟು ಜಾರರನ್ನು (ವ್ಯಭಿಚಾರಿಗಳನ್ನು) ಸಂಪಾದಿಸಿಕೊಂಡಿದೆ.