ನನ್ನ ಸೇವಕನಾದ ಮೋಶೆಯು ನಿನಗೆ ಬೋಧಿಸಿ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವುದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ, ಆಗ ನೀನು ಸಫಲನಾಗುವಿ.
TSK
TSK · ಯೆಶಾಯ 30:21
Treasury of Scripture Knowledge references in ಕನ್ನಡ IRV.
ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.
ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು.
ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ; ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ. ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು; ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.
ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗಬೇಡ, ನಿನ್ನ ಕಾಲನ್ನು ಕೇಡಿಗೆ ದೂರಮಾಡು.
ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
ನಿನ್ನ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವೆನು.
ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.
ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.