TSK

TSK · ಯೆಶಾಯ 30:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯಾಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ.

ನಿನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಅವರನ್ನು ಎಚ್ಚರಿಸಿದೆ. ಆದರೂ ಅವರು ಲಾಲಿಸದೆ ಗರ್ವಿಗಳೂ, ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು. ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿನ್ಯಾಯಗಳನ್ನು ಮೀರಿ ಪಾಪಮಾಡಿ ಮೊಂಡು ಬಿದ್ದು ನಿನ್ನ ಮಾತುಗಳನ್ನು ಕೇಳದೆ ಹೋದರು.

¶ ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ.

ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.

ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ.

ಏಕೆಂದರೆ ನೀನು ಹಟವಾದಿ ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು.

“ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು” ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು.

ಆದಕಾರಣ ನೀನು ಅವರಿಗೆ, ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ, ಶಿಕ್ಷಿತರಾಗದೆ ಇರುವ ಜನಾಂಗ ಇದುವೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ” ಎಂದು ಹೇಳು.

“ಇಸ್ರಾಯೇಲಿನ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ಯೆರೂಸಲೇಮಿಗೂ, ಯೆಹೂದದ ಎಲ್ಲಾ ಊರುಗಳಿಗೂ ಬರಮಾಡಿದ ಕೇಡನ್ನು ನೀವು ನೋಡಿದ್ದೀರಷ್ಟೆ.

ಅದು ದೇವರ ವಾಕ್ಯಕ್ಕಾಗಲೀ ಆತನ ತಿದ್ದುಪಾಟಿಗಾಗಲಿ ಕಿವಿಗೊಡಲಿಲ್ಲ, ಶಿಕ್ಷಣಕ್ಕೆ ಒಳಪಡಲೇ ಇಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ.

¶ “ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.

¶ “ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.

ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.