ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು” ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.
TSK
TSK · ಯೆಶಾಯ 31:3
Treasury of Scripture Knowledge references in ಕನ್ನಡ IRV.
ಜೀವದ ರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ; ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು.
ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
ಆ ದಿನದಲ್ಲಿ ಈ ತೀರದಲ್ಲಿ ವಾಸಿಸುವವರು ಹೇಳುವುದೇನೆಂದರೆ, “ಇಗೋ, ಅಶ್ಶೂರದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?” ಎಂದು ಅಂದುಕೊಳ್ಳುವರು.
ಐಗುಪ್ತದ ಸಹಾಯವು ವ್ಯರ್ಥ ನಿರರ್ಥಕ; ಆದುದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ.
¶ “ಇದೂ ನಿನಗೆ ಅಸಾಧ್ಯವಾಗುವುದಾದರೆ ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ನಿನ್ನಿಂದ ಹೇಗೆ ಸಾಧ್ಯವಾಗುತ್ತದೆ? ರಥಾಶ್ವಬಲಗಳಿಗಾಗಿ ನೀನು ಐಗುಪ್ತ್ಯರನ್ನು ನಂಬಿಕೊಂಡಿರುವಂತೆ ಕಾಣುತ್ತದೆ.
“ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನನ್ನನ್ನು ವಿಚಾರಿಸುವುದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ, ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವುದು.
“ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.
ಕೂಡಿದ್ದ ಜನರು; “ಇದು ಮನುಷ್ಯನ ಧ್ವನಿಯಲ್ಲ, ದೇವರ ಧ್ವನಿಯೇ” ಎಂದು ಆರ್ಭಟಿಸಿದರು.