TSK

TSK · ಯೆಶಾಯ 31:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಬೆಂಕಿಯು ಯಜ್ಞವೇದಿಯ ಮೇಲೆ ಯಾವಾಗಲೂ ಉರಿಯುತ್ತಿರಬೇಕು; ಆರಿಹೋಗಬಾರದು.

ಯೆಹೋವನು ಅವರ ವಿಷಯದಲ್ಲಿ ಹೇಳುವುದು ಏನೆಂದರೆ, “ಅವರು ಪೂಜಿಸುತ್ತಿದ್ದ ದೇವರುಗಳು ಎಲ್ಲಿ ಹೋದರು? ಅವರು ಆಶ್ರಯಿಸಿಕೊಂಡಿದ್ದ ಆಶ್ರಯದುರ್ಗನು ಎಲ್ಲಿದ್ದಾನೆ?

ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು. ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಅಸ್ತಿವಾರಕ್ಕೆ ಹತ್ತಿಕೊಳ್ಳುವುದು.

ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.

ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, ಬೆಟ್ಟಗಳಲ್ಲಿ ಧ್ವಜವನ್ನು ಹಾರಿಸುವಾಗ ನೋಡಿರಿ, ತುತ್ತೂರಿಯನ್ನೂದುವಾಗ ಕೇಳಿರಿ!

ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.

“ನರಪುತ್ರನೇ, ಇಸ್ರಾಯೇಲ್ ವಂಶವೆಂಬ ಲೋಹವು ನನ್ನ ದೃಷ್ಟಿಯಲ್ಲಿ ಕಲ್ಮಷವಾಗಿದೆ; ಕುಲುಮೆಯಲ್ಲಿನ ತಾಮ್ರ, ತವರ, ಕಬ್ಬಿಣ, ಸೀಸ ಮತ್ತು ಕಂದು ಬೆಳ್ಳಿಯ ಹಾಗೆ ಇದ್ದಾರೆ.

¶ “ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.