TSK

TSK · ಯೆಶಾಯ 32:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.

ಹರ್ಷಾನಂದಗಳು ತೋಟಗಳಿಂದ ತೊಲಗಿವೆ. ದ್ರಾಕ್ಷಿಯ ತೋಟಗಳಲ್ಲಿ ಉತ್ಸಾಹದ ಧ್ವನಿಯೂ, ಉಲ್ಲಾಸದ ಆರ್ಭಟವೂ ಇರುವುದಿಲ್ಲ. ತುಳಿಯುವವರು ದ್ರಾಕ್ಷಿಯ ತೊಟ್ಟಿಗಳಲ್ಲಿ ದ್ರಾಕ್ಷಾರಸವನ್ನು ತುಳಿದು ತೆಗೆಯುವುದಿಲ್ಲ. ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿದ್ದೇನೆ.

ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲಾ ಕೊನೆಗೊಂಡಿದೆ; ಲೋಕದ ಸಡಗರವು ಸೆರೆಯಾಗಿ ತೊಲಗಿದೆ.

ಇದಲ್ಲದೆ ನಾನು ಅವುಗಳಲ್ಲಿ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ, ಬೀಸುವ ಕಲ್ಲಿನ ಶಬ್ದವನ್ನೂ, ದೀಪದ ಬೆಳಕನ್ನೂ ನಿಲ್ಲಿಸಿಬಿಡುವೆನು.

¶ ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹಗಳಿಲ್ಲದೆ ಇಸ್ರಾಯೇಲರು ಬಹಳ ದಿನಗಳು ತಾಳಿಕೊಂಡಿರುವರು.

ದ್ರಾಕ್ಷಾಲತೆಯು ಒಣಗಿದೆ ಮತ್ತು ಅಂಜೂರದ ಗಿಡವು ಬಾಡಿಹೋಗಿದೆ; ದಾಳಿಂಬೆ, ಖರ್ಜೂರ ಮತ್ತು ಸೇಬು ಮರಗಳು ಹಾಗು ಹೊಲದ ಸಕಲ ವನವೃಕ್ಷಗಳು ಒಣಗಿ ಹೋಗಿವೆ. ಮನುಷ್ಯರು ಸೊರಗಿ ಸಂತೋಷವಿಲ್ಲದೆ ಕಳೆಗುಂದಿದ್ದಾರೆ.

ಅವರ ಆಸ್ತಿಯು ಸೂರೆಯಾಗುವುದು, ಅವರ ಮನೆಗಳು ಹಾಳಾಗುವವು; ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಿಸರು, ದ್ರಾಕ್ಷಾತೋಟಗಳನ್ನು ಮಾಡಿಕೊಂಡರೂ ಅವುಗಳ ದ್ರಾಕ್ಷಾರಸವನ್ನು ಕುಡಿಯರು.