TSK

TSK · ಯೆಶಾಯ 32:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.

ಆಗ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷಿಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ, ಮುಳ್ಳು ಮತ್ತು ದತ್ತೂರಿಗಳಿಂದ ಮುಚ್ಚಿಕೊಂಡು ಹೋಗುವುದು.

ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.

ಮತ್ತು ಕಸ್ದೀಯರು ಅರಮನೆಯನ್ನೂ, ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು, ಯೆರೂಸಲೇಮಿನ ಸುತ್ತಣ ಗೋಡೆಗಳನ್ನು ಕೆಡವಿದರು.

ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು. ಮುಳ್ಳುಗಿಡಗಳೂ, ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು, “ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ” ಎಂದು ಕೂಗಿಕೊಳ್ಳುವರು.