ಹಾಗಾದರೆ, ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಐಗುಪ್ತ ರಾಜ್ಯವು ಸ್ಥಾಪಿತವಾದ ದಿನ ಮೊದಲುಗೊಂಡು ಇಂದಿನವರೆಗೂ ಅಂಥ ಕಲ್ಲಿನ ಮಳೆ ಬಿದ್ದಿರುವುದಿಲ್ಲ.
TSK
TSK · ಯೆಶಾಯ 32:19
Treasury of Scripture Knowledge references in ಕನ್ನಡ IRV.
¶ ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸುವನು. ಅವು ಧಡಮ್ಮನೆ ಬೀಳುವವು. ಉನ್ನತವಾದ ವೃಕ್ಷಗಳು ಕಡಿದು ಕೆಳಗೆ ಬೀಳುವವು. ಎತ್ತರವಾದ ಮರಗಳು ನೆಲದ ಪಾಲಾಗುವವು.
ಹಾಳುಪಟ್ಟಣವು ಬಿದ್ದುಹೋಗಿದೆ, ಯಾರೂ ಹೋಗದಂತೆ ಪ್ರತಿಯೊಂದು ಮನೆಯೂ ಮುಚ್ಚಿದೆ.
ಆತನು ಹೆಮ್ಮೆಯಿಂದ ವಾಸಿಸುವವರನ್ನು ಇಳಿಸಿದ್ದಾನೆ. ಅವರ ಉನ್ನತ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ, ನೆಲಸಮಮಾಡಿ ಧೂಳಿಗೆ ತಂದಿದ್ದಾನೆ.
ಆಹಾ, ಕರ್ತನು ಒಬ್ಬ ಮಹಾಬಲಿಷ್ಠನನ್ನು ನೇಮಿಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, ನಾಶಕರವಾದ ಬಿರುಗಾಳಿಯಂತೆಯೂ, ಮುಳುಗಿಸುವ ಅತಿಧಾರಾವೃಷ್ಟಿಯಂತೆಯೂ ಬಲಾತ್ಕಾರದಿಂದ ಆ ಪಟ್ಟಣವನ್ನು ತನ್ನ ಕೈಯಿಂದ ಅಧೋಗತಿಗೆ ತರುವನು.
ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ, ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರುಗಾಳಿ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.
ಆದಕಾರಣ, ನೀನು ಸುಣ್ಣಬಳಿಯುವವರಿಗೆ ಹೀಗೆ ನುಡಿ, ‘ವಿಪರೀತ ಮಳೆಯಾಗಿ ಗೋಡೆಯು ಬಿದ್ದುಹೋಗುವುದು, ಆನೆಕಲ್ಲುಗಳು ಸುರಿಯುವವು; ಬಿರುಗಾಳಿಯು ಗೋಡೆಯನ್ನು ಒಡೆದುಹಾಕುವುದು.’
ಆದರೆ ತುಂಬಿತುಳುಕುವ ಜಲಪ್ರವಾಹದಿಂದಲೋ ಎಂಬಂತೆ ನಿನವೆಯ ಸ್ಥಾನವನ್ನು ತೀರಾ ಹಾಳುಮಾಡಿ ತನ್ನ ವಿರೋಧಿಗಳನ್ನು ಹಿಂದಟ್ಟಿ ಅಂಧಕಾರಕ್ಕೆ ತಳ್ಳುವನು.
ತುರಾಯಿ ಮರವೇ, ಗೋಳಾಡು! ದೇವದಾರು ಬಿದ್ದಿದೆ, ಶ್ರೇಷ್ಠವೃಕ್ಷಗಳು ನಾಶವಾಗಿವೆ. ಬಾಷಾನಿನ ಅಲ್ಲೋನ್ ಮರಗಳೇ ಕಿರಿಚಿರಿ! ನುಗ್ಗಲಾಗದ ದಟ್ಟವಾದ ವನವು ಉರುಳಿದೆ.
¶ ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು ರಕ್ತ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು.