TSK

TSK · ಯೆಶಾಯ 32:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಜನರು ಎದ್ದುನಿಂತ ನಂತರ ಅವರು ದೇವರ ಧರ್ಮನಿಯಮಗಳನ್ನು ಸ್ಪಷ್ಟವಾಗಿ ಓದುತ್ತಾ ಅದರ ತಾತ್ಪರ್ಯವನ್ನು ವಿವರಿಸಿದಾಗ ಜನರು ಅರ್ಥಮಾಡಿಕೊಂಡರು.

ತಪ್ಪಿದ ಹೃದಯವುಳ್ಳವರೆಲ್ಲರೂ ವಿವೇಕಿಗಳಾಗುವರು, ಗುಣಗುಟ್ಟುವವರು ಉಪದೇಶವನ್ನು ಕೇಳಿ ನಡೆಯುವರು” ಎಂದು ಹೇಳುತ್ತಾನೆ.

ಅದಕ್ಕೆ ಯೇಸು, ‹“ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.›

ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.

¶ ದೇವರ ವಾಕ್ಯವು ಪ್ರಬಲವಾಯಿತು; ಶಿಷ್ಯರ ಸಂಖ್ಯೆಯು ಯೆರೂಸಲೇಮಿನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂದಿತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತ ನಂಬಿಕೆಗೆ ಒಳಗಾಗುತ್ತಾ ಬಂದರು.

“ಪೂರ್ವದಲ್ಲಿ ನಮ್ಮನ್ನು ಹಿಂಸೆಪಡಿಸಿದವನು, ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಸಾರುತ್ತಿದ್ದಾನೆ” ಎಂಬ ಸುದ್ದಿಯನ್ನು ಅವರು ಕೇಳಿ,