¶ ಇಸ್ರಾಯೇಲರು ಮೋಶೆಯ ಬಳಿಗೆ ಬಂದು ಅವನಿಗೆ, “ನಾವು ಇಲ್ಲಿ ಸಾಯುತ್ತೇವೆ; ಇಲ್ಲವೇ ನಾಶವಾಗಿ ಹೋಗುತ್ತೇವೆ.
TSK
TSK · ಯೆಶಾಯ 33:14
Treasury of Scripture Knowledge references in ಕನ್ನಡ IRV.
ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಕೋಪಹುಟ್ಟಿಸುವೆನು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.
ಎಲ್ಲಾ ಕಡೆಯಲ್ಲಿಯೂ ಅಪಾಯಗಳು ಅವನನ್ನು ಹೆದರಿಸಿ; ಅವನ ಹಿಮ್ಮಡಿ ತುಳಿಯುತ್ತಾ ಬೆನ್ನು ಹತ್ತುವವು.
ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿ ಮಾಡುವಿ. ಯೆಹೋವನು ಮಹಾಕೋಪದಿಂದ ಅವರನ್ನು ನಾಶ ಮಾಡುವನು; ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವುದು.
ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ, ಅವರು ಪಕ್ಕನೆ ಭಯಭ್ರಾಂತರಾದರು; ದುಷ್ಟರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು.
ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ, ಇಸ್ರಾಯೇಲರ ಸದಮಲಸ್ವಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ, ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು.
ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
ಆದುದರಿಂದ ಯೆರೂಸಲೇಮಿನ ಈ ಜನರನ್ನು ಆಳುವ ಧರ್ಮನಿಂದಕರೇ, ಯೆಹೋವನ ಮಾತನ್ನು ಕೇಳಿರಿ,
ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ ಇವುಗಳ ಮೂಲಕ ನಿನ್ನನ್ನು ಶಿಕ್ಷಿಸುವನು.
ಯೆಹೋವನು ನನಗೆ ಹೀಗೆ ಹೇಳಿದನು ನೀನು ಈಗ ಹೋಗಿ, ಈ ಮಾತುಗಳು ಶಾಶ್ವತವಾಗಿರುವಂತೆ ಅವರೆದುರು ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ, ಈ ಮಾತು ಮುಂದಿನ ದಿನಗಳಲ್ಲಿ ಶಾಶ್ವತ ಸಾಕ್ಷಿಯಾಗಿರುವುದು.
ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.
ಅಲ್ಲಿ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವವು, ಧೂಳು ಗಂಧಕವಾಗುವುದು, ದೇಶವೆಲ್ಲಾ ಉರಿಯುವ ಇಳಿಜಾರು ಪ್ರದೇಶವಾಗುವುದು.
¶ ಆತನ ಸಿಟ್ಟಿಗೆ ಯಾರು ಎದುರು ನಿಲ್ಲಲು ಸಾಧ್ಯ? ಆತನ ರೋಷಾಗ್ನಿಯ ಎದುರು ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ. ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
‹ಅವನಿಗೆ ‘ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?’ ಎಂದು ಕೇಳಲು ಅವನು ಮೌನವಾಗಿದ್ದನು.›
‹ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.›
‹ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ›‹ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.›
‹ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ,›
ಏಕೆಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.